‘ಹೊಸೂರಿನ ರಘು, ಯಶವಂತಪುರ ಈರುಳ್ಳಿ ಮಂಡಳಿಯಲ್ಲಿ ಲೆಕ್ಕಾಧಿಕಾರಿ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರಣ್ಯಪುರದಲ್ಲಿ ವಾಸವಿದ್ದರು. ಹೊಸೂರಿನಲ್ಲಿರುವ ತಾಯಿಯನ್ನು ಮಾತನಾಡಿಸಲು ಹೋಗಿದ್ದ ಅವರು ವಾಪಸು ಬೆಂಗಳೂರಿಗೆ ಬರುತ್ತಿದ್ದಾಗಲೇ ಈ ಅವಘಡ ಸಂಭವಿಸಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ಹೇಳಿದರು.