ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಗುದ್ದಿ ಪಾದಚಾರಿ ಸಾವು

Last Updated 3 ನವೆಂಬರ್ 2020, 14:51 IST
ಅಕ್ಷರ ಗಾತ್ರ

ಬೆಂಗಳೂರು: ಬಸವನಗುಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವಾಹನವೊಂದು ಗುದ್ದಿ ತೀವ್ರ ಗಾಯಗೊಂಡಿದ್ದ ಕಮಲಮ್ಮ (70) ಎಂಬುವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

‘ಮೃತ ಕಮಲಮ್ಮ ಅವರ ವಿಳಾಸ ಹಾಗೂ ಸಂಬಂಧಿಕರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸಂಬಂಧಿಕರು ಯಾರಾದರೂ ಇದ್ದರೆ ಬಸವನಗುಡಿ ಸಂಚಾರ ಠಾಣೆ 080–22942668 ಸಂಪರ್ಕಿಸಬಹುದು’ ಎಂದು ಪೊಲೀಸರು ಹೇಳಿದರು.

‘ಅ. 27ರಂದು ಬೃಂದಾವನ ನಗರ ಜಿಂಕೆ ಪಾರ್ಕ್ ಬಳಿ ಕಮಲಮ್ಮ ಅವರು ರಸ್ತೆ ದಾಟುತ್ತಿದ್ದರು. ಅದೇ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಬಂದು ಅವರಿಗೆ ಗುದ್ದಿತ್ತು. ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಸ್ಥಳೀಯರು ಹಾಗೂ ಮಹಿಳಾ ಕಾನ್‌ಸ್ಟೆಬಲೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅ. 29ರಂದು ತೀರಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT