‘ಮಲ್ಲಣ್ಣ ಅತಿ ವೇಗವಾಗಿ ಹಾಗೂ ಅಡ್ಡಾದಿಡ್ಡಿಯಾಗಿ ಟಿಪ್ಪರ್ ಚಲಾಯಿಸಿದ್ದರು. ದೊಡ್ಡ ಬೊಮ್ಮಸಂದ್ರದ ರಸ್ತೆ ಪಕ್ಕವಿರುವ ನಾರಾಯಣಸ್ವಾಮಿ ಎಂಬುವರ ಬಟ್ಟೆ ಅಂಗಡಿಗೆ ಟಿಪ್ಪರ್ ನುಗ್ಗಿಸಿದ್ದರು. ಅದರಿಂದಾಗಿ ಅಂಗಡಿ ಗೋಡೆ ಕುಸಿದು ಬಿದ್ದು, ಟಿಪ್ಪರ್ ಮುಂಭಾಗ ಜಖಂಗೊಂಡಿತ್ತು. ಲಾರಿಯಲ್ಲೇ ಸಿಲುಕಿ ತೇಜಸ್ ಮೃತಪಟ್ಟಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು 2 ಗಂಟೆವರೆಗೆ ಕಾರ್ಯಾಚರಣೆ ನಡೆಸಿ ಮೃತದೇಹ ಹೊರಗೆ ತೆಗೆದರು.ತೀವ್ರ ಗಾಯಗೊಂಡು ನರಳಾಡುತ್ತಿದ್ದ ಕ್ಲೀನರ್ ಮಲ್ಲಣ್ಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯ ಲಾಯಿತು’ ಎಂದು ಪೊಲೀಸರು ಮಾಹಿತಿ ನೀಡಿದರು.