<p><strong>ಬೆಂಗಳೂರು</strong>: ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಮೆಟ್ರೊ ಕಾರ್ಮಿಕ ಬಾಪಿ ಕುಮಾರ್ (23) ಮೃತಪಟ್ಟ ಪ್ರಕರಣ ಸಂಬಂಧ, ಕ್ಯಾಂಟರ್ ವಾಹನ ಚಾಲಕ ದೇವಪ್ರಸನ್ನ (23) ಹಾಗೂ ಮಾಲೀಕ ಮಂಜುನಾಥ್ (37) ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಮೆಟ್ರೊ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಪಿ ಕುಮಾರ್, ನ. 11ರಂದು ರಾತ್ರಿ ರಸ್ತೆ ದಾಟುತ್ತಿದ್ದರು. ಇದೇ ಸಂದರ್ಭದಲ್ಲೇ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದರು. ಕ್ಯಾಂಟರ್ ಸಮೇತ ಚಾಲಕ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಚನ್ನರಾಯಪಟ್ಟಣದ ದೊಡ್ಡಗನಿಯ ದೇವಪ್ರಸನ್ನ (23) ಹಾಗೂ ದಾಸನಪುರ ಹೋಬಳಿಯ ಮಾಕಳಿ ಪ್ರಭಾನಗರದ ಮಂಜುನಾಥ್ (37) ಎಂಬುವವರನ್ನು ಬಂಧಿಸಲಾಗಿದೆ. ಕ್ಯಾಂಟರ್ ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಮೆಟ್ರೊ ಕಾರ್ಮಿಕ ಬಾಪಿ ಕುಮಾರ್ (23) ಮೃತಪಟ್ಟ ಪ್ರಕರಣ ಸಂಬಂಧ, ಕ್ಯಾಂಟರ್ ವಾಹನ ಚಾಲಕ ದೇವಪ್ರಸನ್ನ (23) ಹಾಗೂ ಮಾಲೀಕ ಮಂಜುನಾಥ್ (37) ಅವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಮೆಟ್ರೊ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಪಿ ಕುಮಾರ್, ನ. 11ರಂದು ರಾತ್ರಿ ರಸ್ತೆ ದಾಟುತ್ತಿದ್ದರು. ಇದೇ ಸಂದರ್ಭದಲ್ಲೇ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದರು. ಕ್ಯಾಂಟರ್ ಸಮೇತ ಚಾಲಕ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಚನ್ನರಾಯಪಟ್ಟಣದ ದೊಡ್ಡಗನಿಯ ದೇವಪ್ರಸನ್ನ (23) ಹಾಗೂ ದಾಸನಪುರ ಹೋಬಳಿಯ ಮಾಕಳಿ ಪ್ರಭಾನಗರದ ಮಂಜುನಾಥ್ (37) ಎಂಬುವವರನ್ನು ಬಂಧಿಸಲಾಗಿದೆ. ಕ್ಯಾಂಟರ್ ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>