ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಕ್ಯಾಂಟರ್ ಚಾಲಕ, ಮಾಲೀಕ ಬಂಧನ

Last Updated 13 ನವೆಂಬರ್ 2022, 20:41 IST
ಅಕ್ಷರ ಗಾತ್ರ

ಬೆಂಗಳೂರು: ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಮೆಟ್ರೊ ಕಾರ್ಮಿಕ ಬಾಪಿ ಕುಮಾರ್ (23) ಮೃತಪಟ್ಟ ಪ್ರಕರಣ ಸಂಬಂಧ, ಕ್ಯಾಂಟರ್ ವಾಹನ ಚಾಲಕ ದೇವಪ್ರಸನ್ನ (23) ಹಾಗೂ ಮಾಲೀಕ ಮಂಜುನಾಥ್ (37) ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಮೆಟ್ರೊ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಪಿ ಕುಮಾರ್, ನ. 11ರಂದು ರಾತ್ರಿ ರಸ್ತೆ ದಾಟುತ್ತಿದ್ದರು. ಇದೇ ಸಂದರ್ಭದಲ್ಲೇ ಕ್ಯಾಂಟರ್ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದರು. ಕ್ಯಾಂಟರ್ ಸಮೇತ ಚಾಲಕ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.

‘ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಚನ್ನರಾಯಪಟ್ಟಣದ ದೊಡ್ಡಗನಿಯ ದೇವಪ್ರಸನ್ನ (23) ಹಾಗೂ ದಾಸನಪುರ ಹೋಬಳಿಯ ಮಾಕಳಿ ಪ್ರಭಾನಗರದ ಮಂಜುನಾಥ್ (37) ಎಂಬುವವರನ್ನು ಬಂಧಿಸಲಾಗಿದೆ. ಕ್ಯಾಂಟರ್ ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT