‘ದಾಸರಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ಧರ್ಮರಾವ್, ಮೊಮ್ಮಗಳ ಜೊತೆ ವಾಪಸು ನಂದಿನಿ ಬಡಾವಣೆಗೆ ಬರುತ್ತಿದ್ದರು. ಪೀಣ್ಯದ ಎಸ್ಆರ್ಎಸ್ ಜಂಕ್ಷನ್ ಬಳಿ ವೇಗವಾಗಿ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ವಾಹನದ ಹಿಂಬದಿಯಲ್ಲಿದ್ದ ಪ್ರಣೀತಾ ರಸ್ತೆಗೆ ಬಿದ್ದಿದ್ದಳು. ತಲೆಗೆ ತೀವ್ರ ಪೆಟ್ಟು ಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ಪಡೆಯಲಾಗಿದೆ’ ಎಂದೂ ತಿಳಿಸಿದರು.