<p><strong>ಬೆಂಗಳೂರು</strong>: ಬೆಂಗಳೂರು– ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಓಮ್ನಿ ವ್ಯಾನ್ ನಡುವೆ ಅಪಘಾತ ಸಂಭವಿಸಿದ್ದು, ಓಮ್ನಿ ವ್ಯಾನ್ನಲ್ಲಿ ಬೆಂಕಿ ಹೊತ್ತಿಕೊಂಡು ದಿವ್ಯಾ (16) ಎಂಬುವವರು ಸಜೀವ ದಹನವಾಗಿದ್ದಾರೆ.</p>.<p>‘ಮಾದಾವರದಲ್ಲಿರುವ ಟೋಲ್ಗೇಟ್ ಬಳಿ ಭಾನುವಾರ ರಾತ್ರಿ ಈ ಅವಘಡ ಸಂಭವಿಸಿದೆ. ದಿವ್ಯಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ಸಂಬಂಧಿಕರಾದ ಮಯಾಂಕ್, ಮಂಜುಳಾ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಗೊಂಡಿದ್ದಾರೆ. ಅವರೆಲ್ಲರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಗುಜರಾತ್ನ ದಿವ್ಯಾ ಹಾಗೂ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರೆಲ್ಲರೂ ನೆಲಮಂಗಲದಲ್ಲಿರುವ ಸಂಬಂಧಿಕರ ಮನೆಗೆ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿ ಓಮ್ನಿ ವ್ಯಾನ್ನಲ್ಲಿ ರಾತ್ರಿ ವಾಪಸು ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ತಿಳಿಸಿದರು.</p>.<p>‘ಓಮ್ನಿ ವ್ಯಾನ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇದರಿಂದಾಗಿ ವ್ಯಾನ್ನಲ್ಲಿ ಬೆಂಕಿ ಕಾಣಿಸಿಕೊಂಡು, ಧಗ ಧಗ ಉರಿಯಲಾರಂಭಿಸಿತ್ತು. ಒಳಗಿದ್ದವರು ಹೊರಗೆ ಬರಲು ಹರಸಾಹಸಪಟ್ಟರು. ವ್ಯಾನ್ನಲ್ಲಿಯೇ ಸಿಲುಕಿ ದಿವ್ಯಾ ಮೃತಪಟ್ಟರು. ಕೆಲವರನ್ನು ಸ್ಥಳೀಯರು ಹೊರಗೆ ಕರೆತಂದು ರಕ್ಷಿಸಿದ್ದಾರೆ’ ಎಂದು ಹೇಳಿದರು.</p>.<p>‘ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು– ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಓಮ್ನಿ ವ್ಯಾನ್ ನಡುವೆ ಅಪಘಾತ ಸಂಭವಿಸಿದ್ದು, ಓಮ್ನಿ ವ್ಯಾನ್ನಲ್ಲಿ ಬೆಂಕಿ ಹೊತ್ತಿಕೊಂಡು ದಿವ್ಯಾ (16) ಎಂಬುವವರು ಸಜೀವ ದಹನವಾಗಿದ್ದಾರೆ.</p>.<p>‘ಮಾದಾವರದಲ್ಲಿರುವ ಟೋಲ್ಗೇಟ್ ಬಳಿ ಭಾನುವಾರ ರಾತ್ರಿ ಈ ಅವಘಡ ಸಂಭವಿಸಿದೆ. ದಿವ್ಯಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ಸಂಬಂಧಿಕರಾದ ಮಯಾಂಕ್, ಮಂಜುಳಾ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಗೊಂಡಿದ್ದಾರೆ. ಅವರೆಲ್ಲರೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಗುಜರಾತ್ನ ದಿವ್ಯಾ ಹಾಗೂ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರೆಲ್ಲರೂ ನೆಲಮಂಗಲದಲ್ಲಿರುವ ಸಂಬಂಧಿಕರ ಮನೆಗೆ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿ ಓಮ್ನಿ ವ್ಯಾನ್ನಲ್ಲಿ ರಾತ್ರಿ ವಾಪಸು ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ’ ಎಂದು ತಿಳಿಸಿದರು.</p>.<p>‘ಓಮ್ನಿ ವ್ಯಾನ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇದರಿಂದಾಗಿ ವ್ಯಾನ್ನಲ್ಲಿ ಬೆಂಕಿ ಕಾಣಿಸಿಕೊಂಡು, ಧಗ ಧಗ ಉರಿಯಲಾರಂಭಿಸಿತ್ತು. ಒಳಗಿದ್ದವರು ಹೊರಗೆ ಬರಲು ಹರಸಾಹಸಪಟ್ಟರು. ವ್ಯಾನ್ನಲ್ಲಿಯೇ ಸಿಲುಕಿ ದಿವ್ಯಾ ಮೃತಪಟ್ಟರು. ಕೆಲವರನ್ನು ಸ್ಥಳೀಯರು ಹೊರಗೆ ಕರೆತಂದು ರಕ್ಷಿಸಿದ್ದಾರೆ’ ಎಂದು ಹೇಳಿದರು.</p>.<p>‘ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>