ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿ ತಪ್ಪಿಸಲು ಹೋಗಿ ಅಪಘಾತ: ಪ್ರಾಣ ಬಿಟ್ಟ ಬಾಲಕಿ

* ಚಿಕ್ಕಗೊಲ್ಲರಹಟ್ಟಿ ಬಳಿ ಅವಘಡ; ಇಬ್ಬರಿಗೆ ತೀವ್ರ ಗಾಯ
Last Updated 8 ಅಕ್ಟೋಬರ್ 2021, 16:44 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೊರವಲಯದ ಚಿಕ್ಕಗೊಲ್ಲರಹಟ್ಟಿ ಬಳಿ ಮುಖ್ಯರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದ್ದು, ನುಬಿಯಾ (17) ಎಂಬಾಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿರುವ ಅವಘಡದಲ್ಲಿ ಹರಾನ್ (30) ಹಾಗೂ ಆಫ್ರಿನ್ (15) ಎಂಬುವರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬೆಂಗಳೂರಿನ ಗೋರಿಪಾಳ್ಯ ನಿವಾಸಿ ಹರಾನ್, ಯಮಹಾ ಮೊಪೈಡ್ ದ್ವಿಚಕ್ರ ವಾಹನದಲ್ಲಿ ನುಬಿಯಾ ಹಾಗೂ ಆಫ್ರಿನ್ ಕರೆದುಕೊಂಡು ತಾವರೆಕೆರೆಯತ್ತ ಸಂಬಂಧಿಕರ ಮನೆಗೆ ಹೊರಟಿದ್ದರು. ಈ ಮಾರ್ಗದಲ್ಲಿ ರಸ್ತೆ ಹಾಳಾಗಿ ಹಲವೆಡೆ ದೊಡ್ಡ ಗುಂಡಿಗಳು ಬಿದ್ದಿದ್ದವು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬೆಳಿಗ್ಗೆ 11.15ರ ಸುಮಾರಿಗೆ ಚಿಕ್ಕಗೊಲ್ಲರಹಟ್ಟಿಯ ಸಾಯಿ ಗಾರ್ಮೆಂಟ್ಸ್ ಕಾರ್ಖಾನೆ ಬಳಿ ವಾಹನ ಚಲಾಯಿಸಿಕೊಂಡು ಬಂದಿದ್ದ ಹರಾನ್, ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಲು ಮುಂದಾಗಿದ್ದರು. ಇದೇ ಸಂದರ್ಭದಲ್ಲೇ ಸ್ಕೀಡ್ ಆಗಿ ವಾಹನ ರಸ್ತೆಯಲ್ಲೇ ಉರುಳಿಬಿದ್ದಿತ್ತು. ಮೂವರು ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲೇ ಎದುರಿನಿಂದ ಅತೀ ವೇಗವಾಗಿ ಬಂದಿದ್ದ ಟಿಪ್ಪರ್ ಲಾರಿ, ನುಬಿಯಾಳ ಮೈ ಮೇಲೆಯೇ ಹರಿಯಿತು’ ಎಂದೂ ತಿಳಿಸಿವೆ.

‘ತೀವ್ರ ರಕ್ತಸ್ರಾವವಾಗಿ ನುಬಿಯಾ ಸ್ಥಳದಲ್ಲೇ ಅಸುನೀಗಿದರು. ಗಾಯಗೊಂಡಿದ್ದ ಹರಾನ್ ಹಾಗೂ ಆಫ್ರಿನ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿವೆ.

ಲಾರಿ ಚಾಲಕ ವಶಕ್ಕೆ: ‘ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಟಿಪ್ಪರ್ ಲಾರಿ ಚಲಾಯಿಸಿದ್ದ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಮೃತ ನುಬಿಯಾಳ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT