‘ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಸತೀಶ್, ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ಮಂಗಳವಾರ ಬೆಳಿಗ್ಗೆ ಹೊರಟಿದ್ದರು. ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ದ್ವಿಚಕ್ರ ವಾಹನಕ್ಕೆ, ಲಾರಿ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಸತೀಶ್ ಮೃತಪಟ್ಟಿದ್ದಾರೆ. ಸ್ನೇಹಿತ ಗಾಯೊಂಡಿದ್ದಾರೆ’ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದರು.