<p><strong>ಬೆಂಗಳೂರು</strong>: ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಟಿಪ್ಪರ್ ಲಾರಿ–ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಲಾರಿಯ ಚಕ್ರ ಮೈ ಮೇಲೆ ಹರಿದು ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.</p>.<p>‘ತಮಿಳುನಾಡಿವ ಶ್ರೀದೇವಿ (21) ಹಾಗೂ ಒಂದು ವರ್ಷದ ಮಗು ದಕ್ಷಿತ್ ಮೃತರು. ಶ್ರೀದೇವಿ ಅವರ ಪತಿ ಶಿವಕುಮಾರ್ ಬೈಕ್ ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಅವರಿಗೂ ತೀವ್ರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಕೆ.ಎಂ. ಶಾಂತರಾಜು ತಿಳಿಸಿದರು.</p>.<p>‘ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ.’ ಎಂದೂ ಹೇಳಿದರು.</p>.<p>‘ಹೊರವರ್ತುಲ ರಸ್ತೆಯ ಮಾರತ್ತಹಳ್ಳಿ ಉಡುಪಿ ಪಾರ್ಕ್ ಹೋಟೆಲ್ ಮುಂಭಾಗದಲ್ಲಿ ಹೊರಟಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿತ್ತು. ರಸ್ತೆಯಲ್ಲೇ ಬಿದ್ದಿದ್ದ ಶ್ರೀದೇವಿ ಹಾಗೂ ಮಗುವಿನ ಮೇಲೆ ಲಾರಿಯ ಚಕ್ರ ಹರಿದು ಹೋಗಿತ್ತು.’ ಎಂದೂ ಪೊಲೀಸರು ಹೇಳಿದರು.</p>.<p>‘ಮೂವರನ್ನೂ ಆಸ್ಪತ್ರೆಗೆ ಕರೆದೊಯ್ದಿದ್ದರು. ಶ್ರೀದೇವಿ ಹಾಗೂ ಮಗು, ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಟಿಪ್ಪರ್ ಲಾರಿ–ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಲಾರಿಯ ಚಕ್ರ ಮೈ ಮೇಲೆ ಹರಿದು ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.</p>.<p>‘ತಮಿಳುನಾಡಿವ ಶ್ರೀದೇವಿ (21) ಹಾಗೂ ಒಂದು ವರ್ಷದ ಮಗು ದಕ್ಷಿತ್ ಮೃತರು. ಶ್ರೀದೇವಿ ಅವರ ಪತಿ ಶಿವಕುಮಾರ್ ಬೈಕ್ ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಅವರಿಗೂ ತೀವ್ರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಕೆ.ಎಂ. ಶಾಂತರಾಜು ತಿಳಿಸಿದರು.</p>.<p>‘ಟಿಪ್ಪರ್ ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ.’ ಎಂದೂ ಹೇಳಿದರು.</p>.<p>‘ಹೊರವರ್ತುಲ ರಸ್ತೆಯ ಮಾರತ್ತಹಳ್ಳಿ ಉಡುಪಿ ಪಾರ್ಕ್ ಹೋಟೆಲ್ ಮುಂಭಾಗದಲ್ಲಿ ಹೊರಟಿದ್ದ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿತ್ತು. ರಸ್ತೆಯಲ್ಲೇ ಬಿದ್ದಿದ್ದ ಶ್ರೀದೇವಿ ಹಾಗೂ ಮಗುವಿನ ಮೇಲೆ ಲಾರಿಯ ಚಕ್ರ ಹರಿದು ಹೋಗಿತ್ತು.’ ಎಂದೂ ಪೊಲೀಸರು ಹೇಳಿದರು.</p>.<p>‘ಮೂವರನ್ನೂ ಆಸ್ಪತ್ರೆಗೆ ಕರೆದೊಯ್ದಿದ್ದರು. ಶ್ರೀದೇವಿ ಹಾಗೂ ಮಗು, ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>