ಆಸ್ಪತ್ರೆಗೆ ಹೊರಟಿದ್ದ ಮಹಿಳೆ: ‘ಆರೋಗ್ಯ ತಪಾಸಣೆ ಮಾಡಿಸಲೆಂದು ಲಕ್ಷ್ಮಿ ಅವರು ಬೆಂಗಳೂರಿಗೆ ಬಂದಿದ್ದರು. ಅರಮನೆ ಮೈದಾನದ ಪ್ರವೇಶ ದ್ವಾರ 7 ಹಾಗೂ 8ರ ನಡುವಿನ ಮುಖ್ಯರಸ್ತೆಯಲ್ಲಿ ಸಹೋದರ ಜತೆ ಬೈಕ್ನಲ್ಲಿ ಹೊರಟಿದ್ದರು. ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್, ಬೈಕ್ಗೆ ಡಿಕ್ಕಿ ಹೊಡೆದಿತ್ತು. ಲಕ್ಷ್ಮಿ ರಸ್ತೆಗೆ ಬಿದ್ದಿದ್ದರು. ಅವರ ಮೇಲೆ ಬಸ್ಸಿನ ಚಕ್ರ ಹರಿದಿತ್ತು. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.