‘ಜೆ.ಪಿ.ನಗರದ ಆರೋಪಿ ವರುಣ್, ಆಸ್ಪತ್ರೆಯೊಂದರ ಟೆಕ್ನಿಷಿಯನ್. ಆತ ಹಾಗೂ ಸ್ನೇಹಿತ, ಭಾನುವಾರ ಬೆಳಿಗ್ಗೆ 5 ಗಂಟೆಗೆ ಹೊಸಕೋಟೆಗೆ ಹೋಗಿ ಮಣಿ ಹೋಟೆಲ್ನಲ್ಲಿ ಬಿರಿಯಾನಿ ತಿಂದಿದ್ದರು. ಅಲ್ಲಿಂದ ನಂದಿಬೆಟ್ಟಕ್ಕೆ ಬೆಳಿಗ್ಗೆ 6 ಗಂಟೆಗೆ ಹೋಗಿದ್ದರು. ಆದರೆ, ಅಲ್ಲಿ ವಾಹನಗಳ ದಟ್ಟಣೆ ಹೆಚ್ಚಿತ್ತು. ಹೀಗಾಗಿ, ಬೆಟ್ಟದ ಮೇಲೆ ಹೋಗದೇ ವಾಪಸು ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದರು. ಅದೇ ವೇಳೆಯೇ ಅಪಘಾತ ಆಗಿತ್ತು. ಈ ಬಗ್ಗೆ ಆರೋಪಿ ಹೇಳಿಕೆ ನೀಡಿದ್ದಾನೆ’ ಎಂದೂ ಪೊಲೀಸರು ತಿಳಿಸಿದರು.