<p class="_yeti_done"><strong>ಬೆಂಗಳೂರು: </strong>ನಗರದಿಂದ ಕೊಳ್ಳೆಗಾಲಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದ್ದು, ಬಾಲಕಿ ಸೇರಿ 9 ಪ್ರಯಾಣಿಕರು ಗಾಯಗೊಂಡಿದ್ದಾರೆ.</p>.<p class="_yeti_done">‘ಮೈಸೂರು ರಸ್ತೆಯ ನೆಕ್ಸಾ ಶೋರೂಮ್ ಸಮೀಪದಲ್ಲಿ ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಪಘಾತದಿಂದಾಗಿ ಮೂರುವರೆ ವರ್ಷದ ದಿಯಾಪ್ರಸಾದ್ ಎಂಬಾಕೆಯ ಎಡಗೈ ತುಂಡರಿಸಿದ್ದು, ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು.</p>.<p class="_yeti_done">‘ಚನ್ನಪಟ್ಟಣ ಡಿಪೊಗೆ ಸೇರಿದ್ದ ಬಸ್ಸಿನಲ್ಲಿ 17 ಪ್ರಯಾಣಿಕರು ಇದ್ದರು. ಮೆಟ್ರೊ ಕಂಬಗಳ ಮಧ್ಯೆ ರಸ್ತೆ ವಿಭಜಕ ನಿರ್ಮಾಣ ಮಾಡಲಾಗಿದೆ. ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ ಚಾಲಕ ಶ್ರೀನಿವಾಸ್, ಆ ವಿಭಜಕಕ್ಕೆ ಗುದ್ದಿಸಿದ್ದ. ರಸ್ತೆಯಲ್ಲೇ ಬಸ್ ಉರುಳಿಬಿದ್ದಿತ್ತು’ ಎಂದು ವಿವರಿಸಿದರು.</p>.<p class="_yeti_done">‘ಬಸ್ಸಿನೊಳಗಿದ್ದ ಬಾಲಕಿಯ ಎಡಗೈ ತುಂಡರಿಸಿ, ಕಿಟಕಿಯಿಂದ ಹೊರಗೆ ಹಾರಿ ಬಂದು ರಸ್ತೆಯಲ್ಲಿ ಬಿದ್ದಿತ್ತು. ಬಾಲಕಿಯ ತಾಯಿ ಸೇರಿ ಹಲವು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು.ರಕ್ಷಣೆಗೆ ತೆರಳಿದ್ದ ಸಿಬ್ಬಂದಿ ಹಾಗೂ ಸ್ಥಳೀಯರು, ಬಸ್ಸಿನಲ್ಲಿದ್ದವರನ್ನು ಹೊರಗೆ ತಂದು ಆಸ್ಪತ್ರೆಗೆ ಕರೆದೊಯ್ದರು’ ಎಂದು ಹೇಳಿದರು.</p>.<p class="_yeti_done">‘ಬಾಲಕಿಯ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ವಿವರಿಸಿದರು.</p>.<p class="Subhead">ಚಾಲಕನ ವಿರುದ್ಧ ಎಫ್ಐಆರ್: ‘ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಚಾಲಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಚಾಲಕ ಹಾಗೂ ನಿರ್ವಾಹಕರಿಗೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="_yeti_done"><strong>ಬೆಂಗಳೂರು: </strong>ನಗರದಿಂದ ಕೊಳ್ಳೆಗಾಲಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದ್ದು, ಬಾಲಕಿ ಸೇರಿ 9 ಪ್ರಯಾಣಿಕರು ಗಾಯಗೊಂಡಿದ್ದಾರೆ.</p>.<p class="_yeti_done">‘ಮೈಸೂರು ರಸ್ತೆಯ ನೆಕ್ಸಾ ಶೋರೂಮ್ ಸಮೀಪದಲ್ಲಿ ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಪಘಾತದಿಂದಾಗಿ ಮೂರುವರೆ ವರ್ಷದ ದಿಯಾಪ್ರಸಾದ್ ಎಂಬಾಕೆಯ ಎಡಗೈ ತುಂಡರಿಸಿದ್ದು, ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ’ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು.</p>.<p class="_yeti_done">‘ಚನ್ನಪಟ್ಟಣ ಡಿಪೊಗೆ ಸೇರಿದ್ದ ಬಸ್ಸಿನಲ್ಲಿ 17 ಪ್ರಯಾಣಿಕರು ಇದ್ದರು. ಮೆಟ್ರೊ ಕಂಬಗಳ ಮಧ್ಯೆ ರಸ್ತೆ ವಿಭಜಕ ನಿರ್ಮಾಣ ಮಾಡಲಾಗಿದೆ. ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ ಚಾಲಕ ಶ್ರೀನಿವಾಸ್, ಆ ವಿಭಜಕಕ್ಕೆ ಗುದ್ದಿಸಿದ್ದ. ರಸ್ತೆಯಲ್ಲೇ ಬಸ್ ಉರುಳಿಬಿದ್ದಿತ್ತು’ ಎಂದು ವಿವರಿಸಿದರು.</p>.<p class="_yeti_done">‘ಬಸ್ಸಿನೊಳಗಿದ್ದ ಬಾಲಕಿಯ ಎಡಗೈ ತುಂಡರಿಸಿ, ಕಿಟಕಿಯಿಂದ ಹೊರಗೆ ಹಾರಿ ಬಂದು ರಸ್ತೆಯಲ್ಲಿ ಬಿದ್ದಿತ್ತು. ಬಾಲಕಿಯ ತಾಯಿ ಸೇರಿ ಹಲವು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು.ರಕ್ಷಣೆಗೆ ತೆರಳಿದ್ದ ಸಿಬ್ಬಂದಿ ಹಾಗೂ ಸ್ಥಳೀಯರು, ಬಸ್ಸಿನಲ್ಲಿದ್ದವರನ್ನು ಹೊರಗೆ ತಂದು ಆಸ್ಪತ್ರೆಗೆ ಕರೆದೊಯ್ದರು’ ಎಂದು ಹೇಳಿದರು.</p>.<p class="_yeti_done">‘ಬಾಲಕಿಯ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ವಿವರಿಸಿದರು.</p>.<p class="Subhead">ಚಾಲಕನ ವಿರುದ್ಧ ಎಫ್ಐಆರ್: ‘ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಚಾಲಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಚಾಲಕ ಹಾಗೂ ನಿರ್ವಾಹಕರಿಗೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>