ಬೆಂಗಳೂರು: ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ತಂಗುದಾಣ ಬಳಿ ಕಾರು ಹಾಗೂ ಬಿಎಂಟಿಸಿ ಬಸ್ ನಡುವೆ ಸೋಮವಾರ ಅಪಘಾತ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡು ಕಾರು ಹೊತ್ತಿ ಉರಿದಿದೆ.
‘ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಪಘಾತದಿಂದ ಕಾರು ಸಂಪೂರ್ಣ ಸುಟ್ಟಿದೆ. ಬಸ್ ಚಾಲಕ ಗೌರೀಶ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಬಿಎಂಟಿಸಿ ಘಟಕ 26ಕ್ಕೆ ಸೇರಿದ್ದ ಬಿಎಂಟಿಸಿ ಬಸ್, ಯಶವಂತಪುರದಿಂದ ನಾಯಂಡಹಳ್ಳಿ ಕಡೆಗೆ ಹೊರವರ್ತುಲ ರಸ್ತೆ ಮೂಲಕ ಹೊರಟಿತ್ತು. ಚಂದ್ರಾಲೇಔಟ್ ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅತೀ ವೇಗವಾಗಿ ಬಂದಿದ್ದ ಕಾರು, ಬಸ್ಗೆ ಡಿಕ್ಕಿ ಹೊಡೆದಿತ್ತು.