‘ವರುಣ್ ಅವರು ಹೊರವರ್ತುಲ ರಸ್ತೆಯ ಸುಮನಹಳ್ಳಿ ವೃತ್ತದಿಂದ ನಾಗರಬಾವಿ ವೃತ್ತದ ಕಡೆಗೆ ಹೊರಟಿದ್ದರು. ಮಾರ್ಗಮಧ್ಯೆ ಸರ್ವೀಸ್ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ರಸ್ತೆ ವಿಭಜಕಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ವರುಣ್ ಅವರು ವಾಹನ ಸಮೇತ ಉರುಳಿಬಿದ್ದಿದ್ದರು. ತಲೆಗೆ ತೀವ್ರ ಪೆಟ್ಟು ಬಿಟ್ಟು ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.