<p><strong>ನೆಲಮಂಗಲ</strong>: ರಾಷ್ಟ್ರೀಯ ಹೆದ್ದಾರಿ–75ರ ನೆಲಮಂಗಲ– ಕುಣಿಗಲ್ ಬೈಪಾಸ್ನಲ್ಲಿ ಲಾರಿ ಹಾಗೂ ಬೈಕ್ ನಡುವೆ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬೆಂಗಳೂರು ಶ್ರೀರಾಮಪುರದ ಪ್ರಜ್ವಲ್(22) ಹಾಗೂ ಸಹನಾ(21) ಮೃತಪಟ್ಟ ಕಲಾವಿದರು. ಇಬ್ಬರೂ ಸ್ನೇಹಿತರಾಗಿದ್ದು, ನೃತ್ಯ ಕಲಾವಿದರಾಗಿದ್ದರು. ಕಿರುತೆರೆಯಲ್ಲಿ ಕೆಲವು ಕಾರ್ಯಕ್ರಮಗಳನ್ನು ನೀಡಿದ್ದರು.</p>.<p>ಕುಣಿಗಲ್ನಲ್ಲಿ ಭಾನುವಾರ ಮದುವೆ ಇತ್ತು. ಮದುವೆ ಮುಗಿಸಿಕೊಂಡು ಇಬ್ಬರೂ ಬೈಕ್ನಲ್ಲಿ ವಾಪಸ್ ಬರುತ್ತಿದ್ದರು. ಪಟ್ಟಣದ ಕುಣಿಗಲ್ ವೃತ್ತವನ್ನು ದಾಟುವಾಗ ಬೆಂಗಳೂರು ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಲಾರಿ ಜಪ್ತಿ ಮಾಡಿಕೊಂಡು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಅವೈಜ್ಞಾನಿಕ ಜಂಕ್ಷನ್: ನೆಲಮಂಗಲ ಜಂಕ್ಷನ್ ಅವೈಜ್ಞಾನಿಕವಾಗಿದ್ದು, ರಾತ್ರಿ ವೇಳೆ ನಾಲ್ಕೂ ದಿಕ್ಕಿನಿಂದ ವಾಹನಗಳು ವೇಗವಾಗಿ ಬರುತ್ತಿರುತ್ತವೆ. ಇದರಿಂದ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು– ನೋವು ಆಗುತ್ತಿದೆ ಎಂದು ಸ್ಥಳೀಯರು ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ರಾಷ್ಟ್ರೀಯ ಹೆದ್ದಾರಿ–75ರ ನೆಲಮಂಗಲ– ಕುಣಿಗಲ್ ಬೈಪಾಸ್ನಲ್ಲಿ ಲಾರಿ ಹಾಗೂ ಬೈಕ್ ನಡುವೆ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬೆಂಗಳೂರು ಶ್ರೀರಾಮಪುರದ ಪ್ರಜ್ವಲ್(22) ಹಾಗೂ ಸಹನಾ(21) ಮೃತಪಟ್ಟ ಕಲಾವಿದರು. ಇಬ್ಬರೂ ಸ್ನೇಹಿತರಾಗಿದ್ದು, ನೃತ್ಯ ಕಲಾವಿದರಾಗಿದ್ದರು. ಕಿರುತೆರೆಯಲ್ಲಿ ಕೆಲವು ಕಾರ್ಯಕ್ರಮಗಳನ್ನು ನೀಡಿದ್ದರು.</p>.<p>ಕುಣಿಗಲ್ನಲ್ಲಿ ಭಾನುವಾರ ಮದುವೆ ಇತ್ತು. ಮದುವೆ ಮುಗಿಸಿಕೊಂಡು ಇಬ್ಬರೂ ಬೈಕ್ನಲ್ಲಿ ವಾಪಸ್ ಬರುತ್ತಿದ್ದರು. ಪಟ್ಟಣದ ಕುಣಿಗಲ್ ವೃತ್ತವನ್ನು ದಾಟುವಾಗ ಬೆಂಗಳೂರು ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಲಾರಿ ಜಪ್ತಿ ಮಾಡಿಕೊಂಡು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead">ಅವೈಜ್ಞಾನಿಕ ಜಂಕ್ಷನ್: ನೆಲಮಂಗಲ ಜಂಕ್ಷನ್ ಅವೈಜ್ಞಾನಿಕವಾಗಿದ್ದು, ರಾತ್ರಿ ವೇಳೆ ನಾಲ್ಕೂ ದಿಕ್ಕಿನಿಂದ ವಾಹನಗಳು ವೇಗವಾಗಿ ಬರುತ್ತಿರುತ್ತವೆ. ಇದರಿಂದ ಪದೇ ಪದೇ ಅಪಘಾತಗಳು ಸಂಭವಿಸಿ ಸಾವು– ನೋವು ಆಗುತ್ತಿದೆ ಎಂದು ಸ್ಥಳೀಯರು ನೋವು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>