<p><strong>ಬೆಂಗಳೂರು:</strong> ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ದಿನಪತ್ರಿಕೆ ಹಂಚುವ ಯುವಕ ಎಚ್.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಲಗ್ಗೆರೆಯ ಲಕ್ಷ್ಮಿದೇವಿನಗರ ನಿವಾಸಿಯಾಗಿದ್ದ ಯೋಗೇಶ್, ದಿನಪತ್ರಿಕೆ ಹಂಚಲು ಬುಧವಾರ (ಮೇ 20) ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆಗಳನ್ನು ತೆಗೆದುಕೊಂಡು ಹಂಚಲು ಹೊರಟಿದ್ದ ವೇಳೆಯಲ್ಲೇ ಅಪಘಾತ ಸಂಭವಿಸಿತ್ತು’ ಎಂದು ರಾಜಾಜಿನಗರ ಸಂಚಾರ ಪೊಲೀಸರು ಹೇಳಿದರು.</p>.<p>‘ಶಶಿಕರ್ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಯೋಗೇಶ್ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ, ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಯೋಗೇಶ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.’</p>.<p>‘ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಯೋಗೇಶ್ ಅಸುನೀಗಿದರು.ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ. ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ದಿನಪತ್ರಿಕೆ ಹಂಚುವ ಯುವಕ ಎಚ್.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಲಗ್ಗೆರೆಯ ಲಕ್ಷ್ಮಿದೇವಿನಗರ ನಿವಾಸಿಯಾಗಿದ್ದ ಯೋಗೇಶ್, ದಿನಪತ್ರಿಕೆ ಹಂಚಲು ಬುಧವಾರ (ಮೇ 20) ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆಗಳನ್ನು ತೆಗೆದುಕೊಂಡು ಹಂಚಲು ಹೊರಟಿದ್ದ ವೇಳೆಯಲ್ಲೇ ಅಪಘಾತ ಸಂಭವಿಸಿತ್ತು’ ಎಂದು ರಾಜಾಜಿನಗರ ಸಂಚಾರ ಪೊಲೀಸರು ಹೇಳಿದರು.</p>.<p>‘ಶಶಿಕರ್ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಯೋಗೇಶ್ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ, ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಯೋಗೇಶ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.’</p>.<p>‘ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಯೋಗೇಶ್ ಅಸುನೀಗಿದರು.ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ. ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>