ಬೆಂಗಳೂರು: ಕಂಠೀರವ ಸ್ಟುಡಿಯೋ ಬಳಿ ಅಪಘಾತ ಸಂಭವಿಸಿದ್ದು, ಹೆಡ್ ಕಾನ್ಸ್ಟೆಬಲ್ ಕೆ. ಗೋಪಾಲ್ ಎಂಬುವರು ಗಾಯಗೊಂಡಿದ್ದಾರೆ.
ರಾಜಾಜಿನಗರ ಸಂಚಾರ ಠಾಣೆಯ ಗೋಪಾಲ್, ಕರ್ತವ್ಯದಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ. ವಾಹನ ತಪಾಸಣೆ ವೇಳೆ ಸವಾರನೊಬ್ಬ ತನ್ನ ದ್ವಿಚಕ್ರ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಗೋಪಾಲ್ ಅವರಿಗೆ ಗುದ್ದಿಸಿದ್ದ.
ಗೋಪಾಲ್ ಅವಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.