‘ವಾಹನದಲ್ಲಿ ಗೋ ಮಾಂಸ ಇರುವುದನ್ನು ನೋಡಿದ್ದ ಆರೋಪಿಗಳು, ‘ಗೋಮಾಂಸ ಸಾಗಣೆ ಮಾಡುತ್ತಿದ್ದಿರಾ? ನಿಮ್ಮನ್ನು ಪೊಲೀಸರಿಗೆ ಹಿಡಿದು ಕೊಡುತ್ತೇವೆ. ಈ ರೀತಿ ಮಾಡಬಾರದೆಂದರೆ, ₹ 2 ಲಕ್ಷ ನೀಡಿ’ ಎಂದು ಬೇಡಿಕೆ ಇರಿಸಿದ್ದರು. ಹಣ ನೀಡಲು ಒಪ್ಪದ ಉಮೇಶ್ ಖಾಜಾ ಮೊಹಿನ್, ಅಲ್ಲಿಂದ ತಪ್ಪಿಸಿಕೊಂಡಿದ್ದರು. ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ದೊರೆಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಪ್ರಶಾಂತ್ ಹಾಗೂ ಸೋಮುಗೌಡನನ್ನು ಬಂಧಿಸಲಾಗಿದೆ’ ಎಂದು ಹೇಳಿದರು.