‘ನಗರದ ನಿವಾಸಿಯಾದ ವಾಸುದೇವ್, ದುಬೈನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ರಜೆ ಹಾಕಿ ಬೆಂಗಳೂರಿಗೆ ಬಂದಿದ್ದರು. ಶನಿವಾರ ಬೆಳಿಗ್ಗೆ ಪುನಃ ದುಬೈಗೆ ಹೊರಟಿದ್ದರು. ಅವರನ್ನು ವಿಮಾನ ನಿಲ್ದಾಣದವರೆಗೆ ಬಿಟ್ಟುಬರಲು ಪತ್ನಿಯೇ ಕಾರು ಚಾಲಾಯಿಸಿಕೊಂಡು ತೆರಳುತ್ತಿದ್ದರು. ಅದೇ ವೇಳೆ ಈ ಅವಘಡ ಸಂಭವಿಸಿದೆ’ ಎಂದು ಹೆಬ್ಬಾಳ ಸಂಚಾರ ಪೊಲೀಸರು ಹೇಳಿದರು.