<p><strong>ಬೆಂಗಳೂರು: </strong>ಬಾಗಲೂರು ಸಂತೆ ಬಳಿ ಸೋಮವಾರ ಬೆಳಿಗ್ಗೆ ಎರಡು ಬಸ್ಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಸ್ಥಳೀಯ ನಾಗಾರ್ಜುನ ಕಾಲೇಜು ವಿದ್ಯಾರ್ಥಿ ನಿತೀಶ್,ಸಂಜಯ್ ಹಾಗೂ ದರ್ಶನ್ ಗಾಯಗೊಂಡವರು. ನಿತೀಶ್ನ ಕಾಲಿಗೆ ಪೆಟ್ಟಾಗಿದ್ದು, ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಹೋಗಿದ್ದಾರೆ.</p>.<p>‘ನಾಗಾರ್ಜುನ ಕಾಲೇಜು ಬಸ್ ಹಾಗೂ ಡೆಲ್ಲಿ ಪಬ್ಲಿಕ್ ಶಾಲೆಯ ಬಸ್, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೊರಟಿದ್ದವು. ಬೆಳಿಗ್ಗೆ 7 ಗಂಟೆ ಸುಮಾರಿಗೆ ಎರಡೂ ಬಸ್ಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಒಂದು ಬಸ್, ರಸ್ತೆ ಪಕ್ಕದಲ್ಲಿದ್ದ ಟ್ರಾನ್ಸ್ಫಾರ್ಮರ್ ಕಂಬಕ್ಕೆ ಗುದ್ದಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ಹೇಳಿದರು.</p>.<p>‘ಅಪಘಾತದಿಂದ ಎರಡೂ ಬಸ್ಸಿನ ಗಾಜುಗಳು ಒಡೆದಿದ್ದು, ಮುಂಭಾಗ ಜಖಂಗೊಂಡಿದೆ. ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಚಾಲಕ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶಾಲೆ ಆಡಳಿತ ಮಂಡಳಿಗೂ ಎಚ್ಚರಿಕೆ ನೀಡಿದ್ದೇವೆ’ ಎಂದರು.</p>.<p>‘ಕಾಲೇಜು ಬಸ್ಸಿನಲ್ಲಿ 30 ವಿದ್ಯಾರ್ಥಿಗಳು ಹಾಗೂ ಶಾಲೆ ಬಸ್ಸಿನಲ್ಲಿ ಎಂಟು ವಿದ್ಯಾರ್ಥಿಗಳಿದ್ದರು. ಮೂವರಿಗೆ ಗಾಯವಾಗಿದ್ದು ಬಿಟ್ಟರೆ ಉಳಿದವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ವಿದ್ಯಾರ್ಥಿಗಳನ್ನು ಬೇರೆ ವಾಹನಗಳಲ್ಲಿ ಕಳುಹಿಸಿಕೊಡಲಾಯಿತು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಾಗಲೂರು ಸಂತೆ ಬಳಿ ಸೋಮವಾರ ಬೆಳಿಗ್ಗೆ ಎರಡು ಬಸ್ಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಸ್ಥಳೀಯ ನಾಗಾರ್ಜುನ ಕಾಲೇಜು ವಿದ್ಯಾರ್ಥಿ ನಿತೀಶ್,ಸಂಜಯ್ ಹಾಗೂ ದರ್ಶನ್ ಗಾಯಗೊಂಡವರು. ನಿತೀಶ್ನ ಕಾಲಿಗೆ ಪೆಟ್ಟಾಗಿದ್ದು, ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಹೋಗಿದ್ದಾರೆ.</p>.<p>‘ನಾಗಾರ್ಜುನ ಕಾಲೇಜು ಬಸ್ ಹಾಗೂ ಡೆಲ್ಲಿ ಪಬ್ಲಿಕ್ ಶಾಲೆಯ ಬಸ್, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೊರಟಿದ್ದವು. ಬೆಳಿಗ್ಗೆ 7 ಗಂಟೆ ಸುಮಾರಿಗೆ ಎರಡೂ ಬಸ್ಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಒಂದು ಬಸ್, ರಸ್ತೆ ಪಕ್ಕದಲ್ಲಿದ್ದ ಟ್ರಾನ್ಸ್ಫಾರ್ಮರ್ ಕಂಬಕ್ಕೆ ಗುದ್ದಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ಹೇಳಿದರು.</p>.<p>‘ಅಪಘಾತದಿಂದ ಎರಡೂ ಬಸ್ಸಿನ ಗಾಜುಗಳು ಒಡೆದಿದ್ದು, ಮುಂಭಾಗ ಜಖಂಗೊಂಡಿದೆ. ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಚಾಲಕ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶಾಲೆ ಆಡಳಿತ ಮಂಡಳಿಗೂ ಎಚ್ಚರಿಕೆ ನೀಡಿದ್ದೇವೆ’ ಎಂದರು.</p>.<p>‘ಕಾಲೇಜು ಬಸ್ಸಿನಲ್ಲಿ 30 ವಿದ್ಯಾರ್ಥಿಗಳು ಹಾಗೂ ಶಾಲೆ ಬಸ್ಸಿನಲ್ಲಿ ಎಂಟು ವಿದ್ಯಾರ್ಥಿಗಳಿದ್ದರು. ಮೂವರಿಗೆ ಗಾಯವಾಗಿದ್ದು ಬಿಟ್ಟರೆ ಉಳಿದವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ವಿದ್ಯಾರ್ಥಿಗಳನ್ನು ಬೇರೆ ವಾಹನಗಳಲ್ಲಿ ಕಳುಹಿಸಿಕೊಡಲಾಯಿತು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>