‘ಸಹಾಯಕ್ಕೆ ಬಂದ ಆಟೊ ಚಾಲಕರು, ನನ್ನನ್ನು ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿದ್ದರು. ನನ್ನ ವಾಹನಕ್ಕೆ ಬೀಗ ಹಾಕಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದರು. ನಂತರ, ನನ್ನನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಾನು ನಸುಕಿನಲ್ಲಿ ಸ್ಥಳಕ್ಕೆ ಹೋಗಿ ನೋಡಿದಾಗ ವಾಹನವೇ ಇರಲಿಲ್ಲ. ಯಾರೋ ಕಳವು ಮಾಡಿಕೊಂಡು ಹೋಗಿದ್ದರು. ತೀವ್ರ ಗಾಯವಾಗಿದ್ದರಿಂದ ಮನೆಗೆ ಹೋಗಿ ವಿಶ್ರಾಂತಿ ಪಡೆದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈಗ ಠಾಣೆಗೆ ಬಂದು ದೂರು ನೀಡುತ್ತಿದ್ದೇನೆ’ ಎಂದು ದೂರಿನಲ್ಲಿ ಬರೆದಿದ್ದಾರೆ.