<p><strong>ಬೆಂಗಳೂರು: </strong>ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಟೆಂಪೊ ಟ್ರಾವೆಲರ್ ಚಲಾಯಿಸಿ ಅಪಘಾತ ಉಂಟುಮಾಡಿದ್ದ ಎನ್ನಲಾದ ಚಾಲಕನನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ವಿಜಯನಗರ ಠಾಣೆ ವ್ಯಾಪ್ತಿಯ ಪಟೇಗಾರಪಾಳ್ಯದಲ್ಲಿ ಸೋಮವಾರ ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅಪಘಾತಕ್ಕೆ ಕಾರಣನಾದ ಟೆಂಪೊ ಟ್ರಾವೆಲರ್ ಚಾಲಕ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪಾನಮತ್ತನಾಗಿದ್ದ ನಾಗರಾಜ್, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದ. ರಸ್ತೆಯಲ್ಲಿ ಹೊರಟಿದ್ದ ಮೂರು ದ್ವಿಚಕ್ರ ವಾಹನಕ್ಕೆ ಟೆಂಪೊ ಟ್ರಾವೆಲರ್ ಗುದ್ದಿಸಿದ್ದ. ಅಪಘಾತದ ನಂತರವೂ ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದ.’</p>.<p>‘ಟೆಂಪೊ ಟ್ರಾವೆಲರ್ ಬೆನ್ನಟ್ಟಿ ತಡೆದಿದ್ದ ಸಾರ್ವಜನಿಕರು, ಚಾಲಕ ನಾಗರಾಜ್ನನ್ನು ಹಿಡಿದು ಥಳಿಸಿದ್ದರು. ನಂತರ, ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಸವಾರ ಗಾಯ: ‘ಅಪಘಾತದಿಂದಾಗಿ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಸವಾರ ಮಲ್ಲಿಕಾರ್ಜುನ ಎಂಬುವವರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ನಾಗರಾಜ್ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮದ್ಯದ ಅಂಶ ಕಂಡುಬಂದಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಟೆಂಪೊ ಟ್ರಾವೆಲರ್ ಚಲಾಯಿಸಿ ಅಪಘಾತ ಉಂಟುಮಾಡಿದ್ದ ಎನ್ನಲಾದ ಚಾಲಕನನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>‘ವಿಜಯನಗರ ಠಾಣೆ ವ್ಯಾಪ್ತಿಯ ಪಟೇಗಾರಪಾಳ್ಯದಲ್ಲಿ ಸೋಮವಾರ ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅಪಘಾತಕ್ಕೆ ಕಾರಣನಾದ ಟೆಂಪೊ ಟ್ರಾವೆಲರ್ ಚಾಲಕ ನಾಗರಾಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪಾನಮತ್ತನಾಗಿದ್ದ ನಾಗರಾಜ್, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದ. ರಸ್ತೆಯಲ್ಲಿ ಹೊರಟಿದ್ದ ಮೂರು ದ್ವಿಚಕ್ರ ವಾಹನಕ್ಕೆ ಟೆಂಪೊ ಟ್ರಾವೆಲರ್ ಗುದ್ದಿಸಿದ್ದ. ಅಪಘಾತದ ನಂತರವೂ ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದ.’</p>.<p>‘ಟೆಂಪೊ ಟ್ರಾವೆಲರ್ ಬೆನ್ನಟ್ಟಿ ತಡೆದಿದ್ದ ಸಾರ್ವಜನಿಕರು, ಚಾಲಕ ನಾಗರಾಜ್ನನ್ನು ಹಿಡಿದು ಥಳಿಸಿದ್ದರು. ನಂತರ, ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಸವಾರ ಗಾಯ: ‘ಅಪಘಾತದಿಂದಾಗಿ ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಸವಾರ ಮಲ್ಲಿಕಾರ್ಜುನ ಎಂಬುವವರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ನಾಗರಾಜ್ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮದ್ಯದ ಅಂಶ ಕಂಡುಬಂದಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>