‘ಚಕ್ರನಗರದ ಎರಡನೇ ಅಡ್ಡರಸ್ತೆ ನಿವಾಸಿ ವೆಂಕಟೇಶ್ ಜನವರಿ 5ರಂದು ರಾತ್ರಿ ಕೃತ್ಯ ಎಸಗಿ ಪರಾರಿಯಾಗಿದ್ದ. 9 ತಿಂಗಳು ತನಿಖೆ ನಡೆಸಿದ್ದ ಪೊಲೀಸರು, ಇತ್ತೀಚೆಗೆ ಸಿಕ್ಕ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ₹8 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣ, 750 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ರಾಯಲ್ ಎನ್ಫೀಲ್ಡ್ ಬೈಕ್ ಜಪ್ತಿ ಮಾಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.