ಬೆಂಗಳೂರು: ಕೃಷಿ ಜಮೀನಿನಲ್ಲಿ ಅಕ್ರಮವಾಗಿ ನಿವೇಶನ ಮಾಡಿ ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚಿಸಿ ಆರು ವರ್ಷಗಳಿಂದ ತಲೆಮರೆ ಸಿಕೊಂಡಿದ್ದ ಗ್ರಾನಿಟಿ ಪ್ರಾಪರ್ಟೀಸ್ ಸಂಸ್ಥೆ ಮಾಲೀಕ ಅಶ್ವಾಕ್ ಅಹಮ್ಮದ್ ಎಂಬಾತನನ್ನು ಸಿಸಿಬಿ ಪೊಲೀಸರ ವಿಶೇಷ ತಂಡವು ಬಂಧಿಸಿದೆ.
ಆರೋಪಿ ಈ ಹಿಂದೆ 3 ವರ್ಷಗಳ ಕಾಲ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. 2016ರಲ್ಲಿ ಮತ್ತೆ ಈತನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅದಾದ ಮೇಲೆ ಆರೋಪಿಯು ಜಾಮೀನು ಪಡೆದುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?: ಹೊಸಕೋಟೆಯ ಬಳಿ 2009 ಹಾಗೂ 2010ರಲ್ಲಿ ಅಶ್ವಾಕ್ ಅಹಮ್ಮದ್ ನಿವೇಶನಗಳನ್ನು ಮೋಸದಿಂದ ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚಿಸಿದ್ದ. ಪೊಲೀಸ್ ತನಿಖೆಯಿಂದ ಕೋಟ್ಯಂತರ ರೂಪಾಯಿ ವಂಚಿಸಿದ್ದು ಬೆಳಕಿಗೆ ಬಂದಿತ್ತು. ಈ ಸಂಬಂಧ ರಾಮಮೂರ್ತಿ ನಗರ, ಇಂದಿರಾನಗರ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮಾಲೀಕ ಅಶ್ವಾಕ್ ಅಹಮ್ಮದ್ ವಿರುದ್ಧ 108 ಪ್ರಕರಣಗಳು ದಾಖಲಾಗಿದ್ದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.