‘ಬ್ಯಾಟರಾಯನಪುರ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಶಂಕರ್ ನಾಯಕ್, ತನ್ನ ವ್ಯಾಪ್ತಿಗೆ ಸೇರದ ಸ್ಥಳದಲ್ಲಿ ನಡೆದಿದ್ದ ಕಳ್ಳತನದ ಸಂಬಂಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಬಂಧಿಸಿ ₹ 72 ಲಕ್ಷ ಜಪ್ತಿ ಮಾಡಿದ್ದರು. ಇದಾದ ನಂತರ, ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು. ಜೊತೆಗೆ, ₹ 20 ಲಕ್ಷ ಲಂಚಕ್ಕೂ ಬೇಡಿಕೆ ಇರಿಸಿದ್ದರು ಎಂಬುದು ಎಸಿಬಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.