ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

₹ 75 ಲಕ್ಷ ದೋಚಲು ಸುಳ್ಳು ಪ್ರಕರಣ ಸೃಷ್ಟಿಸಿದ್ದ ಇನ್‌ಸ್ಪೆಕ್ಟರ್: ಸಿಸಿಬಿ ತನಿಖೆ

Published 25 ನವೆಂಬರ್ 2023, 15:47 IST
Last Updated 25 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ಕಳ್ಳತನವಾಗಿದ್ದ ₹ 75 ಲಕ್ಷ ದೋಚಲು ಸುಳ್ಳು ಪ್ರಕರಣ ಸೃಷ್ಟಿಸಿದ್ದ ಆರೋಪದಡಿ ಬಿಡದಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಬ್ಯಾಟರಾಯನಪುರ ಉಪವಿಭಾಗದ ಎಸಿಪಿ ಭರತ್‌ ರೆಡ್ಡಿ ಅವರು ನೀಡಿರುವ ದೂರು ಆಧರಿಸಿ ಶಂಕರ್ ನಾಯಕ್ ಹಾಗೂ ಮಧ್ಯವರ್ತಿ ಲೋಕನಾಥ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

‘ಬ್ಯಾಟರಾಯನಪುರ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಶಂಕರ್ ನಾಯಕ್, ತನ್ನ ವ್ಯಾಪ್ತಿಗೆ ಸೇರದ ಸ್ಥಳದಲ್ಲಿ ನಡೆದಿದ್ದ ಕಳ್ಳತನದ ಸಂಬಂಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಬಂಧಿಸಿ ₹ 72 ಲಕ್ಷ ಜಪ್ತಿ ಮಾಡಿದ್ದರು. ಇದಾದ ನಂತರ, ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು. ಜೊತೆಗೆ, ₹ 20 ಲಕ್ಷ ಲಂಚಕ್ಕೂ ಬೇಡಿಕೆ ಇರಿಸಿದ್ದರು ಎಂಬುದು ಎಸಿಬಿ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಕಮಿಷನರ್ ಬಿ. ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಸಿಸಿಬಿಯ ವಿಶೇಷ ತಂಡ ಕಡತಗಳನ್ನು ಸುಪರ್ದಿಗೆ ಪಡೆದು ತನಿಖೆ ಆರಂಭಿಸಿದೆ. ಶಂಕರ್ ನಾಯಕ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT