ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಫಲ್ ಕಳ್ಳತನ ಆರೋಪ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

Last Updated 10 ಜುಲೈ 2018, 4:40 IST
ಅಕ್ಷರ ಗಾತ್ರ

ಬೆಂಗಳೂರು: ರೈಫಲ್ ಕಳ್ಳತನ ಮಾಡಿದ ಆರೋಪದಡಿ ಕುಮಾರಸ್ವಾಮಿ ಲೇಔಟ್ ಠಾಣೆಯ ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿ ದಕ್ಷಿಣ ವಿಭಾಗ ಡಿಸಿಪಿ ಎಸ್. ಡಿ.ಶರಣಪ್ಪ ಆದೇಶ ಹೊರಡಿಸಿದ್ದಾರೆ.

ಆನಂದ್ ಕೊಳೆಕಾರ್, ಪರಮಾನಂದ ಕೋಟಿ, ಅಶೋಕ್ ಬಿರಾದರ್ ಹಾಗೂ ಬಸವರಾಜ್ ಬೆಳಗಾವಿ ಅಮಾನತಾದವರು.

ಚುನಾವಣೆ ವೇಳೆ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನು ಠಾಣೆಯ ಸುಪರ್ದಿಗೆ ಒಪ್ಪಿಸಿದ್ದರು. ಅವುಗಳಲ್ಲಿ ಸಿಬ್ಬಂದಿ ಜೋಡಿ ನಳಿಕೆಯ ಎರಡು ರೈಫಲ್ ಕದ್ದಿದ್ದರು ಎನ್ನಲಾಗಿದೆ.

ಶಸ್ತ್ರಾಸ್ತ್ರ ನಾಪತ್ತೆಯಾದ ಬಗ್ಗೆ ಪಿಎಸ್ಐ ಸುಮಾ ಅವರು ಹಿರಿಯ ಅಧಿಕಾರಿಗಳಿಗೆ ದೂರು ಕೊಟ್ಟಿದ್ದರು. ವಿಚಾರಣೆ ನಡೆಸಿದಾಗ ಠಾಣೆಯ ಸಿಬ್ಬಂದಿಯೇ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT