‘ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಿದ್ದ ಆರೋಪಿಯು ನಮ್ಮ ಠಾಣೆ ವ್ಯಾಪ್ತಿಯ ಭೂಪಸಂದ್ರ–ಹೆಬ್ಬಾಳ ರಸ್ತೆಯಲ್ಲಿರುವ ತೋಟದ ಮನೆಯ ಬಳಿ ಇರುವ ಕುರಿತು ವಿನೋದ್ ಅವರಿಗೆ ಮಾಹಿತಿ ಲಭಿಸಿತ್ತು. ಹೀಗಾಗಿ ಸಿಬ್ಬಂದಿಯೊಂದಿಗೆ ರಾತ್ರಿ 11 ಗಂಟೆ ಸುಮಾರಿಗೆ ಸ್ಥಳಕ್ಕೆ ಹೋಗಿದ್ದರು. ಆರೋಪಿಯನ್ನು ಬಂಧಿಸಲು ಮುಂದಾದ ಆತ ಸಿಬ್ಬಂದಿಯನ್ನು ತಳ್ಳಿ ಪರಾರಿಯಾಗಲು ಯತ್ನಿಸಿದ್ದ. ಬಳಿಕ ವಿನೋದ್ ಅವರು ಬಂಧಿಸಲು ಪ್ರಯತ್ನಿಸಿದ್ದರು. ಆಗ ಚಾಕುವಿನಿಂದ ಅವರ ಭುಜಕ್ಕೆ ಚುಚ್ಚಿದ್ದ. ಬಳಿಕ ರೈಲ್ವೆ ಹಳಿಗಳನ್ನು ದಾಟಿ ತಪ್ಪಿಸಿಕೊಂಡಿದ್ದ’ ಎಂದು ಹೇಳಿದ್ದಾರೆ.