<p><strong>ಬೆಂಗಳೂರು</strong>: ಷಡ್ಜ ಕಲಾ ಕೇಂದ್ರ ಹಾಗೂ ಭಾರತೀಯ ವಿದ್ಯಾಭವನದ ವತಿಯಿಂದ ನೀಡಲಾಗುವ ಅಚ್ಯುತಶ್ರೀ ಪ್ರಶಸ್ತಿಗೆ ರಾಜ್ಯದ ದೇ.ಸು. ವೆಂಕಟೇಶದಾಸ ಹಾಗೂ ತಮಿಳುನಾಡಿನ ವಿದುಷಿ ವಿಶಾಖಾ ಹರಿ ಆಯ್ಕೆಯಾಗಿದ್ದಾರೆ.</p>.<p>ಪ್ರತಿವರ್ಷ ಹರಿಕಥಾ ಕ್ಷೇತ್ರದ ಸಾಧಕರಿಗೆ ಅಚ್ಯುತಶ್ರೀ ರಾಷ್ಟ್ರೀಯ ನೀಡಲಾಗುತ್ತದೆ. ಭಾರತೀಯ ವಿದ್ಯಾಭವನದಲ್ಲಿ ಸೆ.3ರಂದು ಆಯೋಜಿಸಲಾಗಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೆಂಗಳೂರಿನ ರಾಮಕೃಷ್ಣ ಮಿಷನ್ನ ಸ್ವಾಮಿ ಮಂಗಲನಾಥಾನಂದಜೀ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್ ಭಾಗವಹಿಸಲಿದ್ದಾರೆ ಎಂದು ಷಡ್ಜ ಕಲಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಡಾ. ದತ್ತಾತ್ರೇಯ ಎಲ್. ವೇಲಣಕರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ದತ್ತಾತ್ರೇಯ ಎಲ್. ವೇಲಣಕರ್ ರಚಿಸಿರುವ ‘ದ ಸ್ಪ್ಲೆಂಡರ್ ಆಫ್ ಕಥಾಕೀರ್ತನ’ ಗ್ರಂಥ ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಷಡ್ಜ ಕಲಾ ಕೇಂದ್ರ ಹಾಗೂ ಭಾರತೀಯ ವಿದ್ಯಾಭವನದ ವತಿಯಿಂದ ನೀಡಲಾಗುವ ಅಚ್ಯುತಶ್ರೀ ಪ್ರಶಸ್ತಿಗೆ ರಾಜ್ಯದ ದೇ.ಸು. ವೆಂಕಟೇಶದಾಸ ಹಾಗೂ ತಮಿಳುನಾಡಿನ ವಿದುಷಿ ವಿಶಾಖಾ ಹರಿ ಆಯ್ಕೆಯಾಗಿದ್ದಾರೆ.</p>.<p>ಪ್ರತಿವರ್ಷ ಹರಿಕಥಾ ಕ್ಷೇತ್ರದ ಸಾಧಕರಿಗೆ ಅಚ್ಯುತಶ್ರೀ ರಾಷ್ಟ್ರೀಯ ನೀಡಲಾಗುತ್ತದೆ. ಭಾರತೀಯ ವಿದ್ಯಾಭವನದಲ್ಲಿ ಸೆ.3ರಂದು ಆಯೋಜಿಸಲಾಗಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೆಂಗಳೂರಿನ ರಾಮಕೃಷ್ಣ ಮಿಷನ್ನ ಸ್ವಾಮಿ ಮಂಗಲನಾಥಾನಂದಜೀ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್ ಭಾಗವಹಿಸಲಿದ್ದಾರೆ ಎಂದು ಷಡ್ಜ ಕಲಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಡಾ. ದತ್ತಾತ್ರೇಯ ಎಲ್. ವೇಲಣಕರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ದತ್ತಾತ್ರೇಯ ಎಲ್. ವೇಲಣಕರ್ ರಚಿಸಿರುವ ‘ದ ಸ್ಪ್ಲೆಂಡರ್ ಆಫ್ ಕಥಾಕೀರ್ತನ’ ಗ್ರಂಥ ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>