<p><strong>ಬೆಂಗಳೂರು:</strong> ಸುಂಕದಕಟ್ಟೆ ಬಳಿಯ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗರಾಜ್, ₹ 1.50 ಲಕ್ಷ ಸಮೇತ ಪರಾರಿಯಾಗಿರುವ ಸಂಗತಿ ತನಿಖೆಯಿಂದ ಗೊತ್ತಾಗಿದೆ.</p>.<p>ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಏಪ್ರಿಲ್ 28ರಂದು ನಡೆದಿದ್ದ ಘಟನೆಯಲ್ಲಿ ಗಾಯಗೊಂಡಿರುವ ಯುವತಿ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣದ ಆರೋಪಿ ನಾಗರಾಜ್, ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ. ಆರೋಪಿಯ ಪೋಷಕರು, ಸ್ನೇಹಿತರು, ವ್ಯಾಪಾರದ ಪಾಲುದಾರರು ಹಾಗೂ ಇತರಿಂದಲೂ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.</p>.<p>‘ಆ್ಯಸಿಡ್ ದಾಳಿಗೂ ಮುನ್ನ ಆರೋಪಿ ವ್ಯವಸ್ಥಿತ ಸಂಚು ರೂಪಿಸಿದ್ದ. ದಾಳಿ ಬಳಿಕ ಪೊಲೀಸರು ತನ್ನನ್ನು ಬಂಧಿಸಬಹುದೆಂದು ತಿಳಿದು, ಪರಾರಿಯಾಗಲು ಮೊದಲೇ ಯೋಚಿಸಿದ್ದ. ಅದಕ್ಕಾಗಿ ₹ 1.50 ಲಕ್ಷ ಸಿದ್ಧಪಡಿಸಿಕೊಂಡಿದ್ದ. ಕೃತ್ಯದ ನಂತರ ಅದೇ ನಗದು ಸಮೇತ ಆರೋಪಿ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಮೊಬೈಲ್ ಬಳಸುತ್ತಿಲ್ಲ. ಹೀಗಾಗಿ, ಆತನ ವಿಳಾಸದ ಬಗ್ಗೆ ಸುಳಿವು ಸಿಗುತ್ತಿಲ್ಲ. ಆದರೆ, ಆತ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿರುವ ಮಾಹಿತಿ ಇದೆ. ತಂಡಗಳನ್ನು ಕಳುಹಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p class="Subhead">ಎಎಪಿ ಕಾರ್ಯಕರ್ತರ ಪ್ರತಿಭಟನೆ: ‘ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ತ್ವರಿತವಾಗಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿ ಎಎಪಿ ಮಹಿಳಾ ಘಟಕದ ಕಾರ್ಯಕರ್ತೆಯರು ಕಾಮಾಕ್ಷಿಪಾಳ್ಯ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p class="Briefhead"><strong>ಶ್ರೀಗಂಧ ಮರ ಕಳವು: ಐವರ ಸೆರೆ</strong></p>.<p><strong>ಬೆಂಗಳೂರು:</strong> ಸಾದಹಳ್ಳಿ ಬಳಿಯ ಹಾಲಿವುಡ್ ಟೌನ್ ಬಡಾವಣೆಯಲ್ಲಿ ಶ್ರೀಗಂಧದ ಮರ ಕಳವು ಮಾಡಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ40 ಕೆ.ಜಿ ತೂಕದ ಶ್ರೀಗಂಧ ಜಪ್ತಿ ಮಾಡಿದ್ದಾರೆ.</p>.<p>ತುಮಕೂರು ಶಿರಾದ ವೆಂಕಟೇಶ್ ಅಲಿಯಾಸ್ ಬಿಸ್ಕೆಟ್ (21), ನೆಲಮಂಗಲದ ವೆಂಕಟೇಶ್ ಅಲಿಯಾಸ್ ಸಣ್ಣಿ (28), ಶಿಡ್ಲಘಟ್ಟದ ಅನಿಲ್ಕುಮಾರ್ (42), ಆಂಧ್ರಪ್ರದೇಶದ ವೆಂಕಟರಮಣ (42) ಹಾಗೂ ಕೃಷ್ಣಮೂರ್ತಿ (40) ಬಂಧಿತರು.</p>.<p>‘ಫೆ. 9ರಂದು ಕೃತ್ಯ ನಡೆದಿತ್ತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸುಂಕದಕಟ್ಟೆ ಬಳಿಯ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗರಾಜ್, ₹ 1.50 ಲಕ್ಷ ಸಮೇತ ಪರಾರಿಯಾಗಿರುವ ಸಂಗತಿ ತನಿಖೆಯಿಂದ ಗೊತ್ತಾಗಿದೆ.</p>.<p>ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಏಪ್ರಿಲ್ 28ರಂದು ನಡೆದಿದ್ದ ಘಟನೆಯಲ್ಲಿ ಗಾಯಗೊಂಡಿರುವ ಯುವತಿ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣದ ಆರೋಪಿ ನಾಗರಾಜ್, ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ. ಆರೋಪಿಯ ಪೋಷಕರು, ಸ್ನೇಹಿತರು, ವ್ಯಾಪಾರದ ಪಾಲುದಾರರು ಹಾಗೂ ಇತರಿಂದಲೂ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.</p>.<p>‘ಆ್ಯಸಿಡ್ ದಾಳಿಗೂ ಮುನ್ನ ಆರೋಪಿ ವ್ಯವಸ್ಥಿತ ಸಂಚು ರೂಪಿಸಿದ್ದ. ದಾಳಿ ಬಳಿಕ ಪೊಲೀಸರು ತನ್ನನ್ನು ಬಂಧಿಸಬಹುದೆಂದು ತಿಳಿದು, ಪರಾರಿಯಾಗಲು ಮೊದಲೇ ಯೋಚಿಸಿದ್ದ. ಅದಕ್ಕಾಗಿ ₹ 1.50 ಲಕ್ಷ ಸಿದ್ಧಪಡಿಸಿಕೊಂಡಿದ್ದ. ಕೃತ್ಯದ ನಂತರ ಅದೇ ನಗದು ಸಮೇತ ಆರೋಪಿ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಮೊಬೈಲ್ ಬಳಸುತ್ತಿಲ್ಲ. ಹೀಗಾಗಿ, ಆತನ ವಿಳಾಸದ ಬಗ್ಗೆ ಸುಳಿವು ಸಿಗುತ್ತಿಲ್ಲ. ಆದರೆ, ಆತ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿರುವ ಮಾಹಿತಿ ಇದೆ. ತಂಡಗಳನ್ನು ಕಳುಹಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p class="Subhead">ಎಎಪಿ ಕಾರ್ಯಕರ್ತರ ಪ್ರತಿಭಟನೆ: ‘ಆ್ಯಸಿಡ್ ದಾಳಿ ಪ್ರಕರಣದ ಆರೋಪಿಯನ್ನು ತ್ವರಿತವಾಗಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿ ಎಎಪಿ ಮಹಿಳಾ ಘಟಕದ ಕಾರ್ಯಕರ್ತೆಯರು ಕಾಮಾಕ್ಷಿಪಾಳ್ಯ ಠಾಣೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p class="Briefhead"><strong>ಶ್ರೀಗಂಧ ಮರ ಕಳವು: ಐವರ ಸೆರೆ</strong></p>.<p><strong>ಬೆಂಗಳೂರು:</strong> ಸಾದಹಳ್ಳಿ ಬಳಿಯ ಹಾಲಿವುಡ್ ಟೌನ್ ಬಡಾವಣೆಯಲ್ಲಿ ಶ್ರೀಗಂಧದ ಮರ ಕಳವು ಮಾಡಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ40 ಕೆ.ಜಿ ತೂಕದ ಶ್ರೀಗಂಧ ಜಪ್ತಿ ಮಾಡಿದ್ದಾರೆ.</p>.<p>ತುಮಕೂರು ಶಿರಾದ ವೆಂಕಟೇಶ್ ಅಲಿಯಾಸ್ ಬಿಸ್ಕೆಟ್ (21), ನೆಲಮಂಗಲದ ವೆಂಕಟೇಶ್ ಅಲಿಯಾಸ್ ಸಣ್ಣಿ (28), ಶಿಡ್ಲಘಟ್ಟದ ಅನಿಲ್ಕುಮಾರ್ (42), ಆಂಧ್ರಪ್ರದೇಶದ ವೆಂಕಟರಮಣ (42) ಹಾಗೂ ಕೃಷ್ಣಮೂರ್ತಿ (40) ಬಂಧಿತರು.</p>.<p>‘ಫೆ. 9ರಂದು ಕೃತ್ಯ ನಡೆದಿತ್ತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>