ಇಂದಿರಾಬಾಯಿ, ಬಿಎಂಟಿಸಿಯಲ್ಲಿ ಚಾಲಕ ಕಂ ನಿರ್ವಾಹಕ ಆಗಿ ಕೆಲಸ ಮಾಡುತ್ತಿರುವ ಆರೋಪಿ ಅರುಣ್ ನಾಯ್ಕ್ನ ಪತ್ನಿಯ ಅಕ್ಕ. ಹಿಂದೆ ಒಂದೇ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಮತ್ತು ಇಂದಿರಾಬಾಯಿ ಅನ್ಯೋನ್ಯವಾಗಿದ್ದರು. ಆದರೆ, ಕೆಲವು ದಿನಗಳ ಹಿಂದೆ ಇಂದಿರಾಬಾಯಿ, ಅರುಣ್ ನಾಯ್ಕ್ನಿಂದ ದೂರವಾಗಿದ್ದರು. ಅಲ್ಲದೆ, ಬೇರೊಬ್ಬ ವ್ಯಕ್ತಿಯ ಜತೆ ಸಲುಗೆ ಹೊಂದಿದ್ದರು. ಇದರಿಂದ ಆಕ್ರೋಶಗೊಂಡ ಅರುಣ್ ಆ್ಯಸಿಡ್ ದಾಳಿಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದರು.