<p><strong>ಬೆಂಗಳೂರು:</strong> ಆ್ಯಸಿಡ್ ದಾಳಿಗೆ ಒಳಗಾಗಿದ್ದ ಕನಕಪುರದ ವಿದ್ಯಾರ್ಥಿನಿಗೆ ಇಲ್ಲಿನ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಡ ಕಣ್ಣಿಗೆ ಹಾನಿಯಾಗಿರುವುದು ವೈದ್ಯಕೀಯ ತಪಾಸಣೆಗಳಿಂದ ದೃಢಪಟ್ಟಿದೆ. </p>.<p>ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಆ್ಯಸಿಡ್ ದಾಳಿ ನಡೆದಿತ್ತು. ಕನಕಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಕಣ್ಣಿಗೆ ಸಂಬಂಧಿಸಿದಂತೆ ಮಿಂಟೊ ವೈದ್ಯರು ಚಿಕಿತ್ಸೆ ಒದಗಿಸುತ್ತಿದ್ದಾರೆ. ಸುಟ್ಟ ಗಾಯಕ್ಕೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.</p>.<p>‘ವಿದ್ಯಾರ್ಥಿನಿಯ ಕೆನ್ನೆಯ ಚರ್ಮ ಸುಟ್ಟಿದ್ದು, ಎಡಗಣ್ಣಿನ ದೃಷ್ಟಿ ಭಾಗಶಃ ಕ್ಷೀಣವಾಗಿದೆ. ಬಲ ಕಣ್ಣಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ’ ಎಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದ್ದಾರೆ. </p>.<p>‘ತಪ್ಪಿತಸ್ಥರಿಗೆ ಸರ್ಕಾರವು ಕಾನೂನು ಅಡಿ ಕಠಿಣ ಶಿಕ್ಷೆ ನೀಡುತ್ತದೆ. ಹುಚ್ಚು ಕ್ರಿಮಿಗಳು ದುಷ್ಕೃತ್ಯ ಎಸಗಿದ್ದು, ಇಂತಹ ಘಟನೆಗಳು ಮರುಕಳಿಸಬಾರದು. ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕಾರ್ನಿಯಾವನ್ನು ತಜ್ಞರು ಪರಿಶೀಲಿಸಲಿದ್ದಾರೆ. ಚಿಕಿತ್ಸೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ನೆರವಾಗಲಿದೆ’ ಎಂದು ಸಚಿವ ಹಾಲಪ್ಪ ಆಚಾರ್ ಅವರು ಹೇಳಿದರು.</p>.<p><strong>ಆರೋಪಿ ಸುಮಂತ್ ಬಂಧನ<br />ರಾಮನಗರ:</strong> ಕನಕಪುರದಲ್ಲಿ ಶುಕ್ರವಾರ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿ ಸುಮಂತ್ (22) ವಿರುದ್ಧ ಐಪಿಸಿ ಸೆಕ್ಷನ್ 326 ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.</p>.<p>ತನ್ನನ್ನು ಪ್ರೀತಿಸುವಂತೆ ಈತ 17 ವರ್ಷದ ವಿದ್ಯಾರ್ಥಿನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಶುಕ್ರವಾರ ಸಂಜೆ ವಿದ್ಯಾರ್ಥಿನಿಯು ಕೆರೆ ಏರಿ ಬಳಿ ವಾಯುವಿಹಾರಕ್ಕೆ ಬಂದಾಗ ಅಡ್ಡಗಟ್ಟಿ ಕಿರುಕುಳ ನೀಡಿದ್ದ. ಆಕೆ ವಿರೋಧಿಸಿದಾಗ ಆ್ಯಸಿಡ್ ಎರಚಿ ಪರಾರಿ ಆಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಕ್ರಮಕ್ಕೆ ಒತ್ತಾಯ: </strong>ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಮನಗರ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.</p>.<p>ಪ್ರೀತಿಸುವಂತೆ ಹೆಣ್ಣುಮಕ್ಕಳ ಹಿಂದೆ ಬಿದ್ದು ಪೀಡಿಸುವುದು ಸಾಮಾಜಿಕ ಪಿಡುಗಾಗಿದೆ. ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ಥೆ ಗುಣಮುಖವಾಗಲು ಅಗತ್ಯವಾದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲ ತರನಾದ ಅಶ್ಲೀಲತೆಗಳ ಪ್ರಚಾರದ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಎ. ಶಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>‘ಗಲ್ಲು ಶಿಕ್ಷೆ ವಿಧಿಸಬೇಕು’</strong><br />‘ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಕೋರನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಹೆಣ್ಣು ಮಕ್ಕಳ ಮೇಲೆ<br />ನಿರಂತರ ದೌರ್ಜನ್ಯ ನಡೆಯುತ್ತಿದೆ. ಸಂತ್ರಸ್ತೆಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಆಕೆ ಎಲ್ಲಿ ಓದಲು ಇಚ್ಛಿಸುತ್ತಾಳೆಯೋ ಅಲ್ಲಿ ಓದಿಸಲು ಸರ್ಕಾರ ಸಿದ್ಧವಿದೆ’ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದರು. </p>.<p>ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹಾಗೂ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆ್ಯಸಿಡ್ ದಾಳಿಗೆ ಒಳಗಾಗಿದ್ದ ಕನಕಪುರದ ವಿದ್ಯಾರ್ಥಿನಿಗೆ ಇಲ್ಲಿನ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಡ ಕಣ್ಣಿಗೆ ಹಾನಿಯಾಗಿರುವುದು ವೈದ್ಯಕೀಯ ತಪಾಸಣೆಗಳಿಂದ ದೃಢಪಟ್ಟಿದೆ. </p>.<p>ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಆ್ಯಸಿಡ್ ದಾಳಿ ನಡೆದಿತ್ತು. ಕನಕಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಕಣ್ಣಿಗೆ ಸಂಬಂಧಿಸಿದಂತೆ ಮಿಂಟೊ ವೈದ್ಯರು ಚಿಕಿತ್ಸೆ ಒದಗಿಸುತ್ತಿದ್ದಾರೆ. ಸುಟ್ಟ ಗಾಯಕ್ಕೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.</p>.<p>‘ವಿದ್ಯಾರ್ಥಿನಿಯ ಕೆನ್ನೆಯ ಚರ್ಮ ಸುಟ್ಟಿದ್ದು, ಎಡಗಣ್ಣಿನ ದೃಷ್ಟಿ ಭಾಗಶಃ ಕ್ಷೀಣವಾಗಿದೆ. ಬಲ ಕಣ್ಣಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ’ ಎಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದ್ದಾರೆ. </p>.<p>‘ತಪ್ಪಿತಸ್ಥರಿಗೆ ಸರ್ಕಾರವು ಕಾನೂನು ಅಡಿ ಕಠಿಣ ಶಿಕ್ಷೆ ನೀಡುತ್ತದೆ. ಹುಚ್ಚು ಕ್ರಿಮಿಗಳು ದುಷ್ಕೃತ್ಯ ಎಸಗಿದ್ದು, ಇಂತಹ ಘಟನೆಗಳು ಮರುಕಳಿಸಬಾರದು. ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕಾರ್ನಿಯಾವನ್ನು ತಜ್ಞರು ಪರಿಶೀಲಿಸಲಿದ್ದಾರೆ. ಚಿಕಿತ್ಸೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ನೆರವಾಗಲಿದೆ’ ಎಂದು ಸಚಿವ ಹಾಲಪ್ಪ ಆಚಾರ್ ಅವರು ಹೇಳಿದರು.</p>.<p><strong>ಆರೋಪಿ ಸುಮಂತ್ ಬಂಧನ<br />ರಾಮನಗರ:</strong> ಕನಕಪುರದಲ್ಲಿ ಶುಕ್ರವಾರ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿ ಸುಮಂತ್ (22) ವಿರುದ್ಧ ಐಪಿಸಿ ಸೆಕ್ಷನ್ 326 ಹಾಗೂ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.</p>.<p>ತನ್ನನ್ನು ಪ್ರೀತಿಸುವಂತೆ ಈತ 17 ವರ್ಷದ ವಿದ್ಯಾರ್ಥಿನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಶುಕ್ರವಾರ ಸಂಜೆ ವಿದ್ಯಾರ್ಥಿನಿಯು ಕೆರೆ ಏರಿ ಬಳಿ ವಾಯುವಿಹಾರಕ್ಕೆ ಬಂದಾಗ ಅಡ್ಡಗಟ್ಟಿ ಕಿರುಕುಳ ನೀಡಿದ್ದ. ಆಕೆ ವಿರೋಧಿಸಿದಾಗ ಆ್ಯಸಿಡ್ ಎರಚಿ ಪರಾರಿ ಆಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಕ್ರಮಕ್ಕೆ ಒತ್ತಾಯ: </strong>ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಮನಗರ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.</p>.<p>ಪ್ರೀತಿಸುವಂತೆ ಹೆಣ್ಣುಮಕ್ಕಳ ಹಿಂದೆ ಬಿದ್ದು ಪೀಡಿಸುವುದು ಸಾಮಾಜಿಕ ಪಿಡುಗಾಗಿದೆ. ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ಥೆ ಗುಣಮುಖವಾಗಲು ಅಗತ್ಯವಾದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲ ತರನಾದ ಅಶ್ಲೀಲತೆಗಳ ಪ್ರಚಾರದ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಎ. ಶಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>‘ಗಲ್ಲು ಶಿಕ್ಷೆ ವಿಧಿಸಬೇಕು’</strong><br />‘ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಕೋರನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಹೆಣ್ಣು ಮಕ್ಕಳ ಮೇಲೆ<br />ನಿರಂತರ ದೌರ್ಜನ್ಯ ನಡೆಯುತ್ತಿದೆ. ಸಂತ್ರಸ್ತೆಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಆಕೆ ಎಲ್ಲಿ ಓದಲು ಇಚ್ಛಿಸುತ್ತಾಳೆಯೋ ಅಲ್ಲಿ ಓದಿಸಲು ಸರ್ಕಾರ ಸಿದ್ಧವಿದೆ’ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದರು. </p>.<p>ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹಾಗೂ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>