<p><strong>ಬೆಂಗಳೂರು: </strong>ಕ್ರೆಸೆಂಟ್ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು ರಿಸಿತಾ ವಿಜಯ್ (39) ಎಂಬುವರು ಗಾಯಗೊಂಡಿದ್ದಾರೆ. ಈ ಸಂಬಂಧ ಆ ಮರದಲ್ಲಿ ಕೇಬಲ್ ಅಳವಡಿಸಿರುವ ಕಂಪನಿಗಳ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>‘ಮರಕ್ಕೆ ದೊಡ್ಡ ಗಾತ್ರದ ಕೇಬಲ್ಗಳನ್ನು ಅಳವಡಿಸಲಾಗಿದ್ದು, ಅದರ ಭಾರ ಹೆಚ್ಚಾಗಿ ಕೊಂಬೆ ಮುರಿದು ಬಿದ್ದಿದ್ದರಿಂದಲೇ ಪತ್ನಿ ರಿಸಿತಾ ಅವರು ಗಾಯಗೊಂಡಿರುವುದಾಗಿ ಪತಿ ವಿಜಯಕೃಷ್ಣ ಯಾದವ್ ದೂರು ನೀಡಿದ್ದಾರೆ’ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಹೇಳಿದರು.</p>.<p>‘ಕ್ರೆಸೆಂಟ್ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲೊಂದರ ಮುಂದೆ ಇದೇ 10ರಂದು ರಿಸಿತಾ ನಡೆದುಕೊಂಡು ಹೊರಟಿದ್ದರು. ಅದೇ ಸಂದರ್ಭದಲ್ಲೇ ಮರದ ಕೊಂಬೆ ಅವರ ಮೇಲೆ ಬಿದ್ದಿತ್ತು. ತಲೆ, ಭುಜ ಹಾಗೂ ಎರಡೂ ಕಾಲುಗಳಿಗೆ ಪೆಟ್ಟಾಗಿತ್ತು. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.’</p>.<p>‘ಸಾರ್ವಜನಿಕ ಸ್ಥಳದಲ್ಲಿ ಪ್ರಾಣಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ಕೇಬಲ್ ಅಳವಡಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳೂ ಆ ಬಗ್ಗೆ ಗಮನಹರಿಸದೇ ಕರ್ತವ್ಯಲೋಪ ಎಸಗಿರುವುದಾಗಿ ವಿಜಯಕೃಷ್ಣ ದೂರಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕ್ರೆಸೆಂಟ್ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು ರಿಸಿತಾ ವಿಜಯ್ (39) ಎಂಬುವರು ಗಾಯಗೊಂಡಿದ್ದಾರೆ. ಈ ಸಂಬಂಧ ಆ ಮರದಲ್ಲಿ ಕೇಬಲ್ ಅಳವಡಿಸಿರುವ ಕಂಪನಿಗಳ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>‘ಮರಕ್ಕೆ ದೊಡ್ಡ ಗಾತ್ರದ ಕೇಬಲ್ಗಳನ್ನು ಅಳವಡಿಸಲಾಗಿದ್ದು, ಅದರ ಭಾರ ಹೆಚ್ಚಾಗಿ ಕೊಂಬೆ ಮುರಿದು ಬಿದ್ದಿದ್ದರಿಂದಲೇ ಪತ್ನಿ ರಿಸಿತಾ ಅವರು ಗಾಯಗೊಂಡಿರುವುದಾಗಿ ಪತಿ ವಿಜಯಕೃಷ್ಣ ಯಾದವ್ ದೂರು ನೀಡಿದ್ದಾರೆ’ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಹೇಳಿದರು.</p>.<p>‘ಕ್ರೆಸೆಂಟ್ ರಸ್ತೆಯಲ್ಲಿರುವ ಪ್ರತಿಷ್ಠಿತ ಹೋಟೆಲೊಂದರ ಮುಂದೆ ಇದೇ 10ರಂದು ರಿಸಿತಾ ನಡೆದುಕೊಂಡು ಹೊರಟಿದ್ದರು. ಅದೇ ಸಂದರ್ಭದಲ್ಲೇ ಮರದ ಕೊಂಬೆ ಅವರ ಮೇಲೆ ಬಿದ್ದಿತ್ತು. ತಲೆ, ಭುಜ ಹಾಗೂ ಎರಡೂ ಕಾಲುಗಳಿಗೆ ಪೆಟ್ಟಾಗಿತ್ತು. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.’</p>.<p>‘ಸಾರ್ವಜನಿಕ ಸ್ಥಳದಲ್ಲಿ ಪ್ರಾಣಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ಕೇಬಲ್ ಅಳವಡಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳೂ ಆ ಬಗ್ಗೆ ಗಮನಹರಿಸದೇ ಕರ್ತವ್ಯಲೋಪ ಎಸಗಿರುವುದಾಗಿ ವಿಜಯಕೃಷ್ಣ ದೂರಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>