ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕರ್ಫ್ಯೂ ಅವಧಿಯಲ್ಲಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಈ ವೇಳೆ ಸಂಚಾರಕ್ಕೆ ಪೊಲೀಸ್ ಇಲಾಖೆ ಯಾವುದೇ ಪಾಸ್ ವಿತರಿಸುವುದಿಲ್ಲ. ತುರ್ತು ಅಗತ್ಯ ಇದ್ದವರು ಗುರುತಿನ ಚೀಟಿ ಹಾಗೂ ಸಂಬಂಧಿತ ದಾಖಲೆ ತೋರಿಸಿ ಸಂಚರಿಸಬಹುದು. ಆದರೆ, ಅನಗತ್ಯವಾಗಿ ಸಂಚಾರಕ್ಕೆ ಮುಂದಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.