<p>ಪೀಣ್ಯ ದಾಸರಹಳ್ಳಿ: ‘ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಮೋಸ, ವಂಚನೆಯ ದೂರುಗಳು ಬಂದಿವೆ. ಬಡ ಜನರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ದಬ್ಬಾಳಿಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಎಸ್. ಮುನಿರಾಜು ಎಚ್ಚರಿಸಿದರು.</p>.<p>ಸಾರ್ವಜನಿಕರ ದೂರಿನ ಮೇರೆಗೆ ಮಲ್ಲಸಂದ್ರದ ಕೆ.ಎನ್. ಸೋಮೇಶ್ವರ ಮಾಲೀಕತ್ವದ ನ್ಯಾಯಬೆಲೆ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಈ ಅಂಗಡಿಯಲ್ಲೇ ಖರೀದಿಸಬೇಕು. ಇಲ್ಲದೇ ಇದ್ದರೆ ರೇಷನ್ ಕಾರ್ಡ್ ವಜಾ ಮಾಡಲಾಗುವುದು ಎಂದು ದಬ್ಬಾಳಿಕೆ ಮಾಡುತ್ತಾರೆ. ಎಲ್ಲ ವಸ್ತು ಖರೀದಿಸದೇ ಇದ್ದರೆ ₹ 20 ವಸೂಲಿ ಮಾಡುತ್ತಾರೆ. ತಿಂಗಳಲ್ಲಿ ಎರಡು ದಿನ ಮಾತ್ರ ತೆರೆದು ಉಳಿದ ದಿನ ಆಹಾರ ಧಾನ್ಯ ಖಾಲಿ ಎಂದು ಅಂಗಡಿ ಬಂದ್ ಮಾಡುತ್ತಾರೆ. ಕಳೆದ ತಿಂಗಳು 30 ಕ್ವಿಂಟಲ್ ರಾಗಿಯನ್ನು ಬೇರೆಯವರಿಗೆ ಮಾರಿದ್ದಾರೆ ಎಂಬ ದೂರುಗಳು ಬಂದಿದ್ದವು’ ಎಂದು ಮಾಹಿತಿ ನೀಡಿದರು.</p>.<p>‘ಇಂತಹ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ತೂಕ, ಆಹಾರಧಾನ್ಯ ಪರಿಶೀಲಿಸಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p>ಆಹಾರ ನಿರೀಕ್ಷಕ ಮಹಾಂತೇಶ್ ಗೌಡ, ಆಹಾರ ಶಿರಸ್ತೆದಾರ ಎನ್. ರಾಮು, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಬಿ.ಎಚ್. ಆನಂದ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ: ‘ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಮೋಸ, ವಂಚನೆಯ ದೂರುಗಳು ಬಂದಿವೆ. ಬಡ ಜನರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ದಬ್ಬಾಳಿಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಎಸ್. ಮುನಿರಾಜು ಎಚ್ಚರಿಸಿದರು.</p>.<p>ಸಾರ್ವಜನಿಕರ ದೂರಿನ ಮೇರೆಗೆ ಮಲ್ಲಸಂದ್ರದ ಕೆ.ಎನ್. ಸೋಮೇಶ್ವರ ಮಾಲೀಕತ್ವದ ನ್ಯಾಯಬೆಲೆ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಈ ಅಂಗಡಿಯಲ್ಲೇ ಖರೀದಿಸಬೇಕು. ಇಲ್ಲದೇ ಇದ್ದರೆ ರೇಷನ್ ಕಾರ್ಡ್ ವಜಾ ಮಾಡಲಾಗುವುದು ಎಂದು ದಬ್ಬಾಳಿಕೆ ಮಾಡುತ್ತಾರೆ. ಎಲ್ಲ ವಸ್ತು ಖರೀದಿಸದೇ ಇದ್ದರೆ ₹ 20 ವಸೂಲಿ ಮಾಡುತ್ತಾರೆ. ತಿಂಗಳಲ್ಲಿ ಎರಡು ದಿನ ಮಾತ್ರ ತೆರೆದು ಉಳಿದ ದಿನ ಆಹಾರ ಧಾನ್ಯ ಖಾಲಿ ಎಂದು ಅಂಗಡಿ ಬಂದ್ ಮಾಡುತ್ತಾರೆ. ಕಳೆದ ತಿಂಗಳು 30 ಕ್ವಿಂಟಲ್ ರಾಗಿಯನ್ನು ಬೇರೆಯವರಿಗೆ ಮಾರಿದ್ದಾರೆ ಎಂಬ ದೂರುಗಳು ಬಂದಿದ್ದವು’ ಎಂದು ಮಾಹಿತಿ ನೀಡಿದರು.</p>.<p>‘ಇಂತಹ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ತೂಕ, ಆಹಾರಧಾನ್ಯ ಪರಿಶೀಲಿಸಿ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.</p>.<p>ಆಹಾರ ನಿರೀಕ್ಷಕ ಮಹಾಂತೇಶ್ ಗೌಡ, ಆಹಾರ ಶಿರಸ್ತೆದಾರ ಎನ್. ರಾಮು, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಬಿ.ಎಚ್. ಆನಂದ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>