<p><strong>ಬೆಂಗಳೂರು</strong>: ಜ್ಞಾನ ಭಾರತಿ ಆವರಣದಲ್ಲಿರುವ ಗಾಂಧಿಯ ಅಧ್ಯಯನ ಕೇಂದ್ರದ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಗಾಂಧಿ ಅಧ್ಯಯನ ಕೇಂದ್ರದ ಅವ್ಯವಸ್ಥೆ ಕುರಿತು ‘ಪ್ರಜಾವಾಣಿ’ಯ ಫೆಬ್ರುವರಿ 7ರ ಸಂಚಿಕೆಯಲ್ಲಿ ‘ಗಾಂಧಿ ಅಧ್ಯಯನ ಕೇಂದ್ರಕ್ಕೆ ಪುಂಡರ ಕಾಟ’ ಎಂಬ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರ ಸಚಿವಾಲಯವು, ಈ ಬಗ್ಗೆ ಅನುಪಾಲನ ವರದಿ ನೀಡುವಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿತ್ತು.</p>.<p>‘ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರು ಗಾಂಧಿ ಭವನದ ಕಟ್ಟಡವನ್ನು ಜೀರ್ಣೋದ್ಧಾರ ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದರು. ಕೇಂದ್ರದ ಕಿಟಕಿಗಳಿಗೆ ಗ್ರಿಲ್, ಗೋಡೆಗಳಿಗೆ ಪ್ಲಾಸ್ಟಿಂಗ್, ನೀರು ಸರಬರಾಜು ಸೇರಿದಂತೆ ಕಟ್ಟಡದ ವಿವಿಧ ದುರಸ್ತಿ ಕೆಲಸಗಳಿಗೆ ₹ 9.58 ಲಕ್ಷ ವೆಚ್ಚದಲ್ಲಿ ಪ್ರಸ್ತಾವ ತಯಾರಿಸಲಾಗಿದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಅವರಿಗೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಗಾಂಧಿ ಅಧ್ಯಯನ ಕೇಂದ್ರಕ್ಕೆ ಭದ್ರತಾ ಸಿಬ್ಬಂದಿ ನಿಯೋಜನೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜ್ಞಾನ ಭಾರತಿ ಆವರಣದಲ್ಲಿರುವ ಗಾಂಧಿಯ ಅಧ್ಯಯನ ಕೇಂದ್ರದ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದಲ್ಲಿರುವ ಗಾಂಧಿ ಅಧ್ಯಯನ ಕೇಂದ್ರದ ಅವ್ಯವಸ್ಥೆ ಕುರಿತು ‘ಪ್ರಜಾವಾಣಿ’ಯ ಫೆಬ್ರುವರಿ 7ರ ಸಂಚಿಕೆಯಲ್ಲಿ ‘ಗಾಂಧಿ ಅಧ್ಯಯನ ಕೇಂದ್ರಕ್ಕೆ ಪುಂಡರ ಕಾಟ’ ಎಂಬ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರ ಸಚಿವಾಲಯವು, ಈ ಬಗ್ಗೆ ಅನುಪಾಲನ ವರದಿ ನೀಡುವಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿತ್ತು.</p>.<p>‘ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರು ಗಾಂಧಿ ಭವನದ ಕಟ್ಟಡವನ್ನು ಜೀರ್ಣೋದ್ಧಾರ ಮಾಡುವಂತೆ ಪ್ರಸ್ತಾವ ಸಲ್ಲಿಸಿದ್ದರು. ಕೇಂದ್ರದ ಕಿಟಕಿಗಳಿಗೆ ಗ್ರಿಲ್, ಗೋಡೆಗಳಿಗೆ ಪ್ಲಾಸ್ಟಿಂಗ್, ನೀರು ಸರಬರಾಜು ಸೇರಿದಂತೆ ಕಟ್ಟಡದ ವಿವಿಧ ದುರಸ್ತಿ ಕೆಲಸಗಳಿಗೆ ₹ 9.58 ಲಕ್ಷ ವೆಚ್ಚದಲ್ಲಿ ಪ್ರಸ್ತಾವ ತಯಾರಿಸಲಾಗಿದೆ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಅವರಿಗೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಗಾಂಧಿ ಅಧ್ಯಯನ ಕೇಂದ್ರಕ್ಕೆ ಭದ್ರತಾ ಸಿಬ್ಬಂದಿ ನಿಯೋಜನೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>