ಅವೈಜ್ಞಾನಿಕವಾಗಿ ಕೊಳವೆಬಾವಿಗಳನ್ನು ಕೊರೆಯುತ್ತಿರುವುದು ಮತ್ತು ಅನುಮತಿ ಪಡೆಯದೆ ಕೊಳವೆಬಾವಿ ಕೊರೆಯುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಅನುಮತಿ ಪಡೆಯದೇ ಇದ್ದರೆ ಕಾಯ್ದೆಯಂತೆ ರಿಗ್ ಪಡೆಯಲು ನೀಡಿರುವ ಅನುಮತಿಯನ್ನು ರದ್ದುಪಡಿಸಿ, ಕಾನೂನುಕ್ರಮ ಕೈಗೊಳ್ಳಲಾಗುತ್ತದೆ. ಕೊಳವೆಬಾವಿ ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ದೂರು ದಾಖಲಿಸಿ, ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆದೇಶದಲ್ಲಿ ತಿಳಿಸಿದ್ದಾರೆ.