<p><strong>ಬೆಂಗಳೂರು</strong>: ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ನಾಲ್ಕು ಯೋಜನೆಗಳ ಅಡಿಯಲ್ಲಿ ₹10 ಕೋಟಿ ವೆಚ್ಚ ಮಾಡುವ ಕ್ರಿಯಾಯೋಜನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.</p>.<p>ಆರ್ಯ ವೈಶ್ಯ ಸಮುದಾಯದ 500 ಮಂದಿಗೆ ಸ್ವಯಂ ಉದ್ಯೋಗ ಯೋಜನೆಯಡಿ ವ್ಯಾಪಾರ ಚಟುವಟಿಕೆ ಕೈಗೊಳ್ಳಲು ಶೇಕಡ 4ರ ಬಡ್ಡಿ ದರದಲ್ಲಿ ತಲಾ ₹1 ಲಕ್ಷ ಸಾಲ ಮತ್ತು ಸಹಾಯಧನ ನೀಡುವುದು, ಆರ್ಯ ವೈಶ್ಯ ಆಹಾರ ವಾಹಿನಿ ಆರಂಭಿಸಲು ಬ್ಯಾಂಕ್ನಿಂದ ಸಾಲ ಪಡೆದ 40 ಮಂದಿಗೆ ತಲಾ ₹2 ಲಕ್ಷ ಸಹಾಯಧನ ಒದಗಿಸುವ ಕಾರ್ಯಕ್ರಮಗಳಿಗೆ ಒಪ್ಪಿಗೆ ದೊರೆತಿದೆ.</p>.<p>‘ವಾಸವಿ ಜಲಶಕ್ತಿ ಯೋಜನೆ’ ಅಡಿಯಲ್ಲಿ ಸಮುದಾಯದ 40 ಮಂದಿ ಸಣ್ಣ ರೈತರಿಗೆ ಕೊಳವೆ ಬಾವಿ ಮತ್ತು ಪಂಪ್ಸೆಟ್ ಅಳವಡಿಸಲು ₹2 ಲಕ್ಷ ಸಾಲ ಹಾಗೂ ₹50,000 ಸಹಾಯಧನ ನೀಡುವ ಯೋಜನೆ ಇದೆ. ‘ಅರಿವು ಶೈಕ್ಷಣಿಕ ಸಾಲ ಯೋಜನೆ’ ಅಡಿಯಲ್ಲಿ ಸಿಇಟಿ ಹಾಗೂ ನೀಟ್ ಮೂಲಕ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ 50 ವಿದ್ಯಾರ್ಥಿಗಳಿಗೆ ಶೇ 2ರ ಬಡ್ಡಿ ದರದಲ್ಲಿ ₹1 ಲಕ್ಷ ಸಾಲ ನೀಡುವ ಯೋಜನೆಗೂ ಅನುಮೋದನೆ ನೀಡಲಾಯಿತು.</p>.<p>ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ.ಕೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್.ಡಿ.ಗೌಡ, ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಎಚ್.ಎ ಶೋಭಾ, ಕಂದಾಯ ಇಲಾಖೆ ಉಪ ಕಾರ್ಯದರ್ಶಿಎಸ್.ಎನ್ ಕಲಾವತಿ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಮೂಲಕ ನಾಲ್ಕು ಯೋಜನೆಗಳ ಅಡಿಯಲ್ಲಿ ₹10 ಕೋಟಿ ವೆಚ್ಚ ಮಾಡುವ ಕ್ರಿಯಾಯೋಜನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.</p>.<p>ಆರ್ಯ ವೈಶ್ಯ ಸಮುದಾಯದ 500 ಮಂದಿಗೆ ಸ್ವಯಂ ಉದ್ಯೋಗ ಯೋಜನೆಯಡಿ ವ್ಯಾಪಾರ ಚಟುವಟಿಕೆ ಕೈಗೊಳ್ಳಲು ಶೇಕಡ 4ರ ಬಡ್ಡಿ ದರದಲ್ಲಿ ತಲಾ ₹1 ಲಕ್ಷ ಸಾಲ ಮತ್ತು ಸಹಾಯಧನ ನೀಡುವುದು, ಆರ್ಯ ವೈಶ್ಯ ಆಹಾರ ವಾಹಿನಿ ಆರಂಭಿಸಲು ಬ್ಯಾಂಕ್ನಿಂದ ಸಾಲ ಪಡೆದ 40 ಮಂದಿಗೆ ತಲಾ ₹2 ಲಕ್ಷ ಸಹಾಯಧನ ಒದಗಿಸುವ ಕಾರ್ಯಕ್ರಮಗಳಿಗೆ ಒಪ್ಪಿಗೆ ದೊರೆತಿದೆ.</p>.<p>‘ವಾಸವಿ ಜಲಶಕ್ತಿ ಯೋಜನೆ’ ಅಡಿಯಲ್ಲಿ ಸಮುದಾಯದ 40 ಮಂದಿ ಸಣ್ಣ ರೈತರಿಗೆ ಕೊಳವೆ ಬಾವಿ ಮತ್ತು ಪಂಪ್ಸೆಟ್ ಅಳವಡಿಸಲು ₹2 ಲಕ್ಷ ಸಾಲ ಹಾಗೂ ₹50,000 ಸಹಾಯಧನ ನೀಡುವ ಯೋಜನೆ ಇದೆ. ‘ಅರಿವು ಶೈಕ್ಷಣಿಕ ಸಾಲ ಯೋಜನೆ’ ಅಡಿಯಲ್ಲಿ ಸಿಇಟಿ ಹಾಗೂ ನೀಟ್ ಮೂಲಕ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ 50 ವಿದ್ಯಾರ್ಥಿಗಳಿಗೆ ಶೇ 2ರ ಬಡ್ಡಿ ದರದಲ್ಲಿ ₹1 ಲಕ್ಷ ಸಾಲ ನೀಡುವ ಯೋಜನೆಗೂ ಅನುಮೋದನೆ ನೀಡಲಾಯಿತು.</p>.<p>ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ.ಕೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್.ಡಿ.ಗೌಡ, ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಎಚ್.ಎ ಶೋಭಾ, ಕಂದಾಯ ಇಲಾಖೆ ಉಪ ಕಾರ್ಯದರ್ಶಿಎಸ್.ಎನ್ ಕಲಾವತಿ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>