<p><strong>ಬೆಂಗಳೂರು: </strong>‘ನಗರದಲ್ಲಿ ಡಿಸೈನ್(ವಿನ್ಯಾಸ) ಕಾಲೇಜು ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಸಮ್ಮಾನ್ ಮತ್ತು ಪ್ರೊ. ಎಂ.ಎಸ್. ನಂಜುಂಡರಾವ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ನಗರದಲ್ಲಿ ಈವರೆಗೂ ಡಿಸೈನ್ ಕಾಲೇಜು ಸ್ಥಾಪಿಸಿಲ್ಲ ಎಂಬುದೇ ಆಶ್ಚರ್ಯ. ಎಷ್ಟೋ ವರ್ಷಗಳ ಹಿಂದೆ<br />ಯೇ ಆಗಬೇಕಿದ್ದ ಕೆಲಸ ಇದು. ಈ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಚರ್ಚೆ ನಡೆಸಿದ್ದೇನೆ’ ಎಂದು ಹೇಳಿದರು.</p>.<p>‘ಸದ್ಯ ನೀಡುತ್ತಿರುವ ಶಿಕ್ಷಣವು ವಿದ್ಯಾರ್ಥಿಗಳ ಬದುಕು ರೂಪಿಸಿಕೊಳ್ಳಲು ಪೂರಕವಾಗಿಲ್ಲ. ಕಲಿಕಾ ವಿಧಾನವನ್ನು ಬದಲಿಸುವ ಕೆಲಸ ಆಗಬೇಕಿದೆ’ ಎಂದರು.</p>.<p>‘ಚಿತ್ರಕಲಾ ಪರಿಷತ್ತು ಪ್ರತಿವರ್ಷ ಆಯೋಜಿಸುವ ಚಿತ್ರಸಂತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೇರೆ ದೇಶಗಳಲ್ಲಿ ನಡೆಯುವ ಚಿತ್ರಸಂತೆಗೆ ಅಲ್ಲಿನ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚಿನ ಕಲಾಸಕ್ತರು ಭಾಗವಹಿಸುತ್ತಾರೆ. ಆ ರೀತಿಯ ವಾತಾವರಣ ಇಲ್ಲಿಯೂ ಸೃಷ್ಟಿಯಾಗಬೇಕಿದೆ’ ಎಂದು ಅವರು ಅಭಿಪ್ರಾಯಪಟ್ಟರು. ರುಮಾಲೆ ಚೆನ್ನಬಸವಯ್ಯರ ನೆನಪಿನಲ್ಲಿ ಆಯೋಜಿಸಿದ್ದ ‘ಬೆಂಗಳೂರು ಲ್ಯಾಂಡ್ಸ್ಕೇಪ್’ ಚಿತ್ರ ಪ್ರದರ್ಶನವನ್ನು ಖ್ಯಾತ ಕಲಾವಿದ ಪ್ರೊ.ಪ್ರಭಾಕರ್ ಕೊಲ್ಟೆ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಗರದಲ್ಲಿ ಡಿಸೈನ್(ವಿನ್ಯಾಸ) ಕಾಲೇಜು ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಸಮ್ಮಾನ್ ಮತ್ತು ಪ್ರೊ. ಎಂ.ಎಸ್. ನಂಜುಂಡರಾವ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ನಗರದಲ್ಲಿ ಈವರೆಗೂ ಡಿಸೈನ್ ಕಾಲೇಜು ಸ್ಥಾಪಿಸಿಲ್ಲ ಎಂಬುದೇ ಆಶ್ಚರ್ಯ. ಎಷ್ಟೋ ವರ್ಷಗಳ ಹಿಂದೆ<br />ಯೇ ಆಗಬೇಕಿದ್ದ ಕೆಲಸ ಇದು. ಈ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಚರ್ಚೆ ನಡೆಸಿದ್ದೇನೆ’ ಎಂದು ಹೇಳಿದರು.</p>.<p>‘ಸದ್ಯ ನೀಡುತ್ತಿರುವ ಶಿಕ್ಷಣವು ವಿದ್ಯಾರ್ಥಿಗಳ ಬದುಕು ರೂಪಿಸಿಕೊಳ್ಳಲು ಪೂರಕವಾಗಿಲ್ಲ. ಕಲಿಕಾ ವಿಧಾನವನ್ನು ಬದಲಿಸುವ ಕೆಲಸ ಆಗಬೇಕಿದೆ’ ಎಂದರು.</p>.<p>‘ಚಿತ್ರಕಲಾ ಪರಿಷತ್ತು ಪ್ರತಿವರ್ಷ ಆಯೋಜಿಸುವ ಚಿತ್ರಸಂತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೇರೆ ದೇಶಗಳಲ್ಲಿ ನಡೆಯುವ ಚಿತ್ರಸಂತೆಗೆ ಅಲ್ಲಿನ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚಿನ ಕಲಾಸಕ್ತರು ಭಾಗವಹಿಸುತ್ತಾರೆ. ಆ ರೀತಿಯ ವಾತಾವರಣ ಇಲ್ಲಿಯೂ ಸೃಷ್ಟಿಯಾಗಬೇಕಿದೆ’ ಎಂದು ಅವರು ಅಭಿಪ್ರಾಯಪಟ್ಟರು. ರುಮಾಲೆ ಚೆನ್ನಬಸವಯ್ಯರ ನೆನಪಿನಲ್ಲಿ ಆಯೋಜಿಸಿದ್ದ ‘ಬೆಂಗಳೂರು ಲ್ಯಾಂಡ್ಸ್ಕೇಪ್’ ಚಿತ್ರ ಪ್ರದರ್ಶನವನ್ನು ಖ್ಯಾತ ಕಲಾವಿದ ಪ್ರೊ.ಪ್ರಭಾಕರ್ ಕೊಲ್ಟೆ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>