ಹೊಸ ವರ್ಷದ ಸಂಭ್ರಮ ಆಚರಣೆ ನಡೆಯುವ ಸ್ಥಳಗಳಲ್ಲಿ ಕಸದ ತೊಟ್ಟಿಗಳನ್ನು ಇಡಲಾಗಿದೆ.ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಪ್ರಹರಿ ವಾಹನಗಳನ್ನು ನಿಯೋಜಿಸಲಾಗಿದೆ. ಅವಘಡಗಳು ಸಂಭವಿಸಿದರೆ ತುರ್ತಾಗಿ ಸ್ಪಂದಿಸಲು ಆಂಬುಲೆನ್ಸ್, ಅಗತ್ಯ ವೈದ್ಯರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗ್ನಿ ಶಾಮಕ ಸೇವೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಸ್ಥಳಗಳಲ್ಲಿ ಶುಚಿತ್ವವನ್ನು ಕಾಪಾಡಲು ಪಾಲಿಕೆ ವತಿಯಿಂದ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಇವುಗಳನ್ನು ಬಳಸಬೇಕು ಎಂದು ಬಿಬಿಎಂಪಿ ಕೋರಿದೆ.