ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಾನು ಜಾತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಹುಟ್ಟಿದ ತಕ್ಷಣವೇ ಶ್ರೇಷ್ಠ ಹಾಗೂ ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಯಲಿದೆ. ಪ್ರಕರಣದ ತನಿಖೆಗೆ ಸಹಕರಿಸುತ್ತೇನೆ’ ಎಂದೂ ಹೇಳಿದರು.