<p><strong>ಬೆಂಗಳೂರು:</strong> ನಟ ದರ್ಶನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಜ್ಞಾನಭಾರತಿ ಠಾಣೆ ಕಾನ್ಸ್ಟೆಬಲ್ ಡಿ.ಆರ್.ದೇವರಾಜ್ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪಶ್ಚಿಮ ವಿಭಾಗದ ಪೊಲೀಸರು, ಚಿಕಿತ್ಸೆಗಾಗಿ ದರ್ಶನ್ ಪರವಾಗಿ ವ್ಯವಸ್ಥಾಪಕ ನೀಡಲು ಮುಂದಾಗಿದ್ದ ಹಣವನ್ನು ತಿರಸ್ಕರಿಸಿದ್ದಾರೆ.</p>.<p>ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ಇದೇ 15ರ ತಡರಾತ್ರಿ ಹಮ್ಮಿಕೊಂಡಿದ್ದ ಹುಟ್ಟುಹಬ್ಬದ ವೇಳೆ ಕೆಲ ಅಭಿಮಾನಿಗಳು ದೇವರಾಜ್ ಮುಖಕ್ಕೆ ಗುದ್ದಿದ್ದರು. ತೀವ್ರ ಗಾಯಗೊಂಡ ದೇವರಾಜ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಈ ಚಿಕಿತ್ಸೆ ‘ಆರೋಗ್ಯ ಭಾಗ್ಯ’ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ವಿಶೇಷ ಪ್ರಕರಣವೆಂದು ಪರಿಗಣಿಸಿ ಚಿಕಿತ್ಸಾ ವೆಚ್ಚವನ್ನು ಭರಿಸಲು ಪೊಲೀಸ್ ಹಿರಿಯ ಅಧಿಕಾರಿಗಳೇ ಕ್ರಮ ಕೈಗೊಂಡಿದ್ದಾರೆ.</p>.<p>ಇದರ ಮಧ್ಯೆಯೇ ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿದ್ದ ದರ್ಶನ್ ಅವರ ವ್ಯವಸ್ಥಾಪಕ, ಚಿಕಿತ್ಸಾ ವೆಚ್ಚಕ್ಕಾಗಿ ₹2 ಲಕ್ಷ ನೀಡುವುದಾಗಿ ಹೇಳಿದ್ದರು. ಆತನನ್ನು ತರಾಟೆಗೆ ತೆಗೆದುಕೊಂಡ ಅಧಿಕಾರಿ, ‘ನಿಮ್ಮ ಬೇಜವಾಬ್ದಾರಿಯಿಂದಲೇ ನಮ್ಮ ಕುಟುಂಬದ ಸದಸ್ಯ ಆಸ್ಪತ್ರೆ ಸೇರಿದ್ದಾನೆ. ಹಣ ನೀಡಿದ ಮಾತ್ರಕ್ಕೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿರುಗೇಟು ನೀಡಿ<br />ರುವುದಾಗಿ ಮೂಲಗಳು ತಿಳಿಸಿವೆ.</p>.<p>‘ನಿಮ್ಮ ಹಣದ ಅವಶ್ಯಕತೆ ನಮಗಿಲ್ಲ. ನೀವು ಕಾನೂನು ಕ್ರಮ ಎದುರಿಸಲೇಬೇಕು’ ಎಂದು ಅಧಿಕಾರಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p>.<p>*<br />ಕಾನ್ಸ್ಟೆಬಲ್ ಚಿಕಿತ್ಸಾ ವೆಚ್ಚಕ್ಕೆ ಹಣದ ಸಮಸ್ಯೆ ಇಲ್ಲ. ಇಲಾಖೆ ಅವರ ಜೊತೆಗಿದೆ. ದರ್ಶನ್ ವ್ಯವಸ್ಥಾಪಕರಿಗೂ ಅದನ್ನೇ ಹೇಳಿ, ಅವರು ನೀಡಲು ಮುಂದಾಗಿದ್ದ ಹಣ ತಿರಸ್ಕರಿಸಿದ್ದೇವೆ.<br /><em><strong>– ಬಿ.ರಮೇಶ್, ಪಶ್ಚಿಮ ವಿಭಾಗದ ಡಿಸಿಪಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಟ ದರ್ಶನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಜ್ಞಾನಭಾರತಿ ಠಾಣೆ ಕಾನ್ಸ್ಟೆಬಲ್ ಡಿ.ಆರ್.ದೇವರಾಜ್ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪಶ್ಚಿಮ ವಿಭಾಗದ ಪೊಲೀಸರು, ಚಿಕಿತ್ಸೆಗಾಗಿ ದರ್ಶನ್ ಪರವಾಗಿ ವ್ಯವಸ್ಥಾಪಕ ನೀಡಲು ಮುಂದಾಗಿದ್ದ ಹಣವನ್ನು ತಿರಸ್ಕರಿಸಿದ್ದಾರೆ.</p>.<p>ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ಇದೇ 15ರ ತಡರಾತ್ರಿ ಹಮ್ಮಿಕೊಂಡಿದ್ದ ಹುಟ್ಟುಹಬ್ಬದ ವೇಳೆ ಕೆಲ ಅಭಿಮಾನಿಗಳು ದೇವರಾಜ್ ಮುಖಕ್ಕೆ ಗುದ್ದಿದ್ದರು. ತೀವ್ರ ಗಾಯಗೊಂಡ ದೇವರಾಜ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಈ ಚಿಕಿತ್ಸೆ ‘ಆರೋಗ್ಯ ಭಾಗ್ಯ’ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ವಿಶೇಷ ಪ್ರಕರಣವೆಂದು ಪರಿಗಣಿಸಿ ಚಿಕಿತ್ಸಾ ವೆಚ್ಚವನ್ನು ಭರಿಸಲು ಪೊಲೀಸ್ ಹಿರಿಯ ಅಧಿಕಾರಿಗಳೇ ಕ್ರಮ ಕೈಗೊಂಡಿದ್ದಾರೆ.</p>.<p>ಇದರ ಮಧ್ಯೆಯೇ ಹಿರಿಯ ಅಧಿಕಾರಿಯನ್ನು ಸಂಪರ್ಕಿಸಿದ್ದ ದರ್ಶನ್ ಅವರ ವ್ಯವಸ್ಥಾಪಕ, ಚಿಕಿತ್ಸಾ ವೆಚ್ಚಕ್ಕಾಗಿ ₹2 ಲಕ್ಷ ನೀಡುವುದಾಗಿ ಹೇಳಿದ್ದರು. ಆತನನ್ನು ತರಾಟೆಗೆ ತೆಗೆದುಕೊಂಡ ಅಧಿಕಾರಿ, ‘ನಿಮ್ಮ ಬೇಜವಾಬ್ದಾರಿಯಿಂದಲೇ ನಮ್ಮ ಕುಟುಂಬದ ಸದಸ್ಯ ಆಸ್ಪತ್ರೆ ಸೇರಿದ್ದಾನೆ. ಹಣ ನೀಡಿದ ಮಾತ್ರಕ್ಕೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿರುಗೇಟು ನೀಡಿ<br />ರುವುದಾಗಿ ಮೂಲಗಳು ತಿಳಿಸಿವೆ.</p>.<p>‘ನಿಮ್ಮ ಹಣದ ಅವಶ್ಯಕತೆ ನಮಗಿಲ್ಲ. ನೀವು ಕಾನೂನು ಕ್ರಮ ಎದುರಿಸಲೇಬೇಕು’ ಎಂದು ಅಧಿಕಾರಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p>.<p>*<br />ಕಾನ್ಸ್ಟೆಬಲ್ ಚಿಕಿತ್ಸಾ ವೆಚ್ಚಕ್ಕೆ ಹಣದ ಸಮಸ್ಯೆ ಇಲ್ಲ. ಇಲಾಖೆ ಅವರ ಜೊತೆಗಿದೆ. ದರ್ಶನ್ ವ್ಯವಸ್ಥಾಪಕರಿಗೂ ಅದನ್ನೇ ಹೇಳಿ, ಅವರು ನೀಡಲು ಮುಂದಾಗಿದ್ದ ಹಣ ತಿರಸ್ಕರಿಸಿದ್ದೇವೆ.<br /><em><strong>– ಬಿ.ರಮೇಶ್, ಪಶ್ಚಿಮ ವಿಭಾಗದ ಡಿಸಿಪಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>