<p><strong>ಬೆಂಗಳೂರು</strong>: ಬಂದೂಕು ಪರವಾನಗಿ ರದ್ದತಿಗೆ ಸಂಬಂಧಿಸಿದಂತೆ ಪೊಲೀಸರು ನೀಡಿದ್ದ ನೋಟಿಸ್ಗೆ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರು ಉತ್ತರಿಸಿದ್ದಾರೆ. ಪರವಾನಗಿ ರದ್ದು ಮಾಡದಂತೆ ಮನವಿ ಮಾಡಿದ್ದಾರೆ.</p>.<p>ಬೆಂಗಳೂರು ಪೊಲೀಸ್ ಕಮಿಷನರೇಟ್ನ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ಜ.7ರಂದು ಬಂದೂಕು ಪರವಾನಗಿ ರದ್ದುಗೊಳಿಸುವ ಸಂಬಂಧ ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ಗೆ ದರ್ಶನ್ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ನನಗೆ ಬಂದೂಕು ಪರವಾನಗಿ ಬೇಕು. ನಾನು ಸೆಲೆಬ್ರಿಟಿ ಆಗಿದ್ದು, ಹೋದ ಕಡೆ ಹೆಚ್ಚಿನ ಜನರು ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆ ಬಹಳ ಮುಖ್ಯವಾಗಿದೆ. ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಿಕೊಂಡಿದ್ದರೂ ವೈಯಕ್ತಿಕ ರಕ್ಷಣೆಗಾಗಿ ಬಂದೂಕು ಪರವಾನಗಿ ಅವಶ್ಯಕತೆಯಿದೆ. ಬಂದೂಕು ಪರವಾನಗಿ ರದ್ದು ಮಾಡಬೇಡಿ’ ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ.</p>.<p>‘ನನ್ನ ವಿರುದ್ಧ ದಾಖಲಾದ ಪ್ರಕರಣದ ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಿಲ್ಲ. ಒಂದು ವೇಳೆ ಅಂತಹ ಘಟನೆಗಳು ನಡೆದರೆ ಕಾನೂನು ಕ್ರಮ ಜರುಗಿಸಬಹುದು. ಅಂತಹ ತಪ್ಪು ಕೂಡ ನಾನು ಮಾಡುವುದಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರಕರಣದ ಸಾಕ್ಷಿದಾರರನ್ನು ಬೆದರಿಸುವ ಸಾಧ್ಯತೆಗಳಿದ್ದು, ಬಂದೂಕು ಪರವಾನಗಿ ರದ್ದತಿಗಾಗಿ ನೋಟಿಸ್ ಜಾರಿ ಮಾಡಲಾಗಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದರ್ಶನ್ ಅವರು ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಂದೂಕು ಪರವಾನಗಿ ರದ್ದತಿಗೆ ಸಂಬಂಧಿಸಿದಂತೆ ಪೊಲೀಸರು ನೀಡಿದ್ದ ನೋಟಿಸ್ಗೆ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರು ಉತ್ತರಿಸಿದ್ದಾರೆ. ಪರವಾನಗಿ ರದ್ದು ಮಾಡದಂತೆ ಮನವಿ ಮಾಡಿದ್ದಾರೆ.</p>.<p>ಬೆಂಗಳೂರು ಪೊಲೀಸ್ ಕಮಿಷನರೇಟ್ನ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ಜ.7ರಂದು ಬಂದೂಕು ಪರವಾನಗಿ ರದ್ದುಗೊಳಿಸುವ ಸಂಬಂಧ ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ಗೆ ದರ್ಶನ್ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ನನಗೆ ಬಂದೂಕು ಪರವಾನಗಿ ಬೇಕು. ನಾನು ಸೆಲೆಬ್ರಿಟಿ ಆಗಿದ್ದು, ಹೋದ ಕಡೆ ಹೆಚ್ಚಿನ ಜನರು ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆ ಬಹಳ ಮುಖ್ಯವಾಗಿದೆ. ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಿಕೊಂಡಿದ್ದರೂ ವೈಯಕ್ತಿಕ ರಕ್ಷಣೆಗಾಗಿ ಬಂದೂಕು ಪರವಾನಗಿ ಅವಶ್ಯಕತೆಯಿದೆ. ಬಂದೂಕು ಪರವಾನಗಿ ರದ್ದು ಮಾಡಬೇಡಿ’ ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ.</p>.<p>‘ನನ್ನ ವಿರುದ್ಧ ದಾಖಲಾದ ಪ್ರಕರಣದ ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಿಲ್ಲ. ಒಂದು ವೇಳೆ ಅಂತಹ ಘಟನೆಗಳು ನಡೆದರೆ ಕಾನೂನು ಕ್ರಮ ಜರುಗಿಸಬಹುದು. ಅಂತಹ ತಪ್ಪು ಕೂಡ ನಾನು ಮಾಡುವುದಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಪ್ರಕರಣದ ಸಾಕ್ಷಿದಾರರನ್ನು ಬೆದರಿಸುವ ಸಾಧ್ಯತೆಗಳಿದ್ದು, ಬಂದೂಕು ಪರವಾನಗಿ ರದ್ದತಿಗಾಗಿ ನೋಟಿಸ್ ಜಾರಿ ಮಾಡಲಾಗಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದರ್ಶನ್ ಅವರು ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>