ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ‘ಸಂಜನಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. 2018ರಲ್ಲಿ ಸರ್ಜರಿಗೂ ಒಳಗಾಗಿದ್ದು, 2019ರಿಂದ ಆಸ್ತಮಾ ಹಾಗೂ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಚಳಿಗಾಲದಲ್ಲಿ ಸಮಸ್ಯೆ ತೀವ್ರವಾಗುವ ಕಾರಣ, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಬೇಕು’ ಎಂದು ವಕೀಲ ಅಸ್ಮತ್ ಪಾಷಾ ಮನವಿ ಮಾಡಿದರು.