ಪ್ರಭಾರ ಉಪತಹಶೀಲ್ದಾರ್ ಚಿದಾನಂದ್ ಮಾತನಾಡಿ, ಸರ್ಕಾರ ಜಾರಿಗೆ ತರುವ ಎಲ್ಲ ಕಾರ್ಯಕ್ರಮಗಳಲ್ಲಿ ರೈತರು ಭಾಗವಹಿಸಿ, ಇಲ್ಲಿ ಸಿಗುವಂತಹ ಮಾಹಿತಿ ಪಡೆದುಕೊಳ್ಳುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಇದರಿಂದ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ. ಹಣ ವ್ಯರ್ಥವಾಗುವುದಿಲ್ಲ, ಮಧ್ಯವರ್ತಿಗಳ ಹಾವಳಿಯೂ ಇರುವುದಿಲ್ಲ. ಸಾಕಷ್ಟು ರೈತರು, ಮಾಹಿತಿ ಇದ್ದರೂ ಸದುಪಯೋಗ ಪಡಿಸಿಕೊಳ್ಳುತ್ತಿಲ್ಲ ಎಂದರು.