ಕಳೆದ ವರ್ಷ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹೆಲ್ಮೆಟ್ ಬಳಕೆಯಿಂದ ಆಗುವ ಲಾಭದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮಹತ್ವದ ಕೆಲಸ ಐಜಿಪಿ ಆಲೋಕಕುಮಾರ ಅವರ ನೇತೃತ್ವದಲ್ಲಿ ನಡೆದಿತ್ತು. ಹೆಲ್ಮೆಟ್ ಇಲ್ಲದೇ ವಾಹನ ಚಾಲನೆ ಮಾಡುವವರನ್ನು ಹಿಡಿದು ದಂಡ ವಿಧಿಸಿದ್ದರಿಂದ ಜನ ಸಹಜವಾಗಿಯೇ ಹೆಲ್ಮೆಟ್ ಧರಿಸುತ್ತಿದ್ದರು. ಆದರೆ, ಇಲಾಖೆ ಅಧಿಕಾರಿಗಳು ನಂತರ ಮೃದು ಧೋರಣೆ ತಾಳಿದ್ದರಿಂದಾಗಿ ಜನ ಹೆಲ್ಮೆಟ್ ಇಲ್ಲದೇ ವಾಹನ ಚಾಲನೆ ಮಾಡುವುದು ಸಾಮಾನ್ಯವಾಗಿದೆ.