ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ನಗರದ ವಿಜಯನಗರದ ಕಾಲಭೈರವೇಶ್ವರ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ.
ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸೌಮ್ಯನಾಥ ಸ್ವಾಮೀಜಿಯವರು ಈ ಕೇಂದ್ರವನ್ನು ಭಾನುವಾರ ಉದ್ಘಾಟಿಸಿದರು.
ಈ ಕೇಂದ್ರದಲ್ಲಿ ನುರಿತ ತಜ್ಞರಿದ್ದು ಸೋಂಕಿತರಿಗೆ ಪ್ರತಿದಿನ ತಪಾಸಣೆ ನಡೆಸಿ ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ. ಔಷಧಿ, ಹಾಸಿಗೆ ಕೂಡ ಇಲ್ಲಿ ಲಭ್ಯವಿರಲಿದೆ.
ಸೋಂಕಿತರನ್ನು ಉಪಚರಿಸಲು ನುರಿತ ಸಹಾಯಕರು ಇರಲಿದ್ದು, ಪ್ರತಿದಿನ ಯೋಗ, ಪ್ರಾಣಾಯಾಮ ಸೇರಿದಂತೆ ಉತ್ತಮ ಆರೋಗ್ಯಕ್ಕೆ ಅಮೂಲ್ಯವಾದ ಸಲಹೆಗಳನ್ನು ನೀಡುವ ತಂಡ ಕಾರ್ಯನಿರ್ವಹಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.