<p><strong>ಬೆಂಗಳೂರು: </strong>ಅಡಿಗಾಸ್ ಯಾತ್ರಾ ಪ್ರವಾಸ ಸಂಸ್ಥೆಯ ರಜತ ಮಹೋತ್ಸವ ಬಸವನಗುಡಿಯಲ್ಲಿ ನಡೆಯಿತು.</p>.<p>ರಜತ ಮಹೋತ್ಸವ ಕೈಪಿಡಿ ಬಿಡುಗಡೆ ಮಾಡಿದ ಬಸವನಗುಡಿ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇಷ್ಮಾ ಮಾತನಾಡಿ, ‘ಪ್ರವಾಸಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ.ದೇಶ ಸುತ್ತು, ಕೋಶ ಓದು ಎಂಬ ನಾಣ್ನುಡಿಯಂತೆ ಪ್ರವಾಸಗಳಿಂದ ಬೇರೆ ಬೇರೆ<br />ಪ್ರದೇಶಗಳ ಬಗ್ಗೆ ತಿಳಿವಳಿಕೆ ಮೂಡುತ್ತದೆ’ ಎಂದರು.</p>.<p>ಭೂವಿಜ್ಞಾನ ಸಂಸ್ಥೆಯ ಮಾಜಿ ಅಧಿಕಾರಿ, ಲೇಖಕ ಇ.ಡಿ. ನರಹರಿ ಮಾತನಾಡಿ, ‘ಭಾರತ ವೈವಿಧ್ಯಮಯ ಭೂಮಿ. ಇಲ್ಲಿನ ಭೂಭಾಗಗಳು ಅಪರಿಮಿತ ಸೋಜಿಗದಿಂದ ಕೂಡಿವೆ. ಅಡಿಗಾಸ್ ಯಾತ್ರಾ ಉತ್ತಮ ಪ್ರವಾಸಗಳನ್ನು ಆಯೋಜಿಸುವುದರ ಮೂಲಕ ಪ್ರವಾಸೋದ್ಯಮಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ’ ಎಂದರು.</p>.<p>ಪ್ರವಾಸದ ಅನುಭವ ತೆರೆದಿಟ್ಟಸೂರ್ಯನಾರಾಯಣ ರಾವ್, ‘ಪ್ರತಿಕೂಲ ಹವಾಮಾನ, ಅಪರಿಚಿತ ತಾಣಗಳಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರವಾಸಿಗರ ಬಗ್ಗೆ ವಹಿಸುವ ಕಾಳಜಿ ಸ್ತುತ್ಯರ್ಹ. ಸಂಸ್ಥೆಯ ಸೇವೆಗಳು ಗುಣಮಟ್ಟದಿಂದ ಕೂಡಿವೆ. ಇಂತಹ ನಂಬಿಕಸ್ಥ, ಪ್ರಾಮಾಣಿಕ ಸಂಸ್ಥೆ ಸುವರ್ಣ ಮಹೋತ್ಸವ ಆಚರಿಸುವಂತಾಗಲಿ’ ಎಂದು ಹಾರೈಸಿದರು.</p>.<p>ಸಂಸ್ಥೆಯ ಸ್ಥಾಪಕ ಕೆ. ನಾಗರಾಜ ಅಡಿಗ, ‘ಕಡಿಮೆ ದಿನಗಳಲ್ಲಿ ದೂರದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಗಳಿಗೆ ವಿಶೇಷ ಪ್ರವಾಸದ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಅಮರನಾಥ, ಕೇದಾರನಾಥ ಹಾಗೂ ಕೈಲಾಸ ಮಾನಸ ಸರೋವರಕ್ಕೆ ಹೆಲಿಕಾಪ್ಟರ್ ಮೂಲಕ ಯಾತ್ರೆಯನ್ನು ಆಯೋಜಿಸಿ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮಾಲ್ಡೀವ್ಸ್, ಶ್ರೀಲಂಕಾ, ಥಾಯ್ಲೆಂಡ್, ಸಿಂಗಪುರ, ಮಲೇಷ್ಯಾ, ನೇಪಾಳ, ಭೂತಾನ್, ಹಾಂಕಾಂಗ್, ಮಕಾವ್, ಇಂಡೋನೇಷ್ಯಾ ಪ್ರವಾಸಗಳನ್ನು ರೂಪಿಸಲಾಗಿದೆ' ಎಂದು ತಿಳಿಸಿದರು.</p>.<p>‘ರಜತ ಮಹೋತ್ಸವದ ಪ್ರಯುಕ್ತ ಕೈಲಾಸ ಮಾನಸ ಸರೋವರ ಯಾತ್ರಿಕರಿಗೆ ಈ ಬಾರಿ ವಿಶೇಷವಾಗಿ ₹20 ಸಾವಿರ ರಿಯಾಯಿತಿ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಡಿಗಾಸ್ ಯಾತ್ರಾ ಪ್ರವಾಸ ಸಂಸ್ಥೆಯ ರಜತ ಮಹೋತ್ಸವ ಬಸವನಗುಡಿಯಲ್ಲಿ ನಡೆಯಿತು.</p>.<p>ರಜತ ಮಹೋತ್ಸವ ಕೈಪಿಡಿ ಬಿಡುಗಡೆ ಮಾಡಿದ ಬಸವನಗುಡಿ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇಷ್ಮಾ ಮಾತನಾಡಿ, ‘ಪ್ರವಾಸಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ.ದೇಶ ಸುತ್ತು, ಕೋಶ ಓದು ಎಂಬ ನಾಣ್ನುಡಿಯಂತೆ ಪ್ರವಾಸಗಳಿಂದ ಬೇರೆ ಬೇರೆ<br />ಪ್ರದೇಶಗಳ ಬಗ್ಗೆ ತಿಳಿವಳಿಕೆ ಮೂಡುತ್ತದೆ’ ಎಂದರು.</p>.<p>ಭೂವಿಜ್ಞಾನ ಸಂಸ್ಥೆಯ ಮಾಜಿ ಅಧಿಕಾರಿ, ಲೇಖಕ ಇ.ಡಿ. ನರಹರಿ ಮಾತನಾಡಿ, ‘ಭಾರತ ವೈವಿಧ್ಯಮಯ ಭೂಮಿ. ಇಲ್ಲಿನ ಭೂಭಾಗಗಳು ಅಪರಿಮಿತ ಸೋಜಿಗದಿಂದ ಕೂಡಿವೆ. ಅಡಿಗಾಸ್ ಯಾತ್ರಾ ಉತ್ತಮ ಪ್ರವಾಸಗಳನ್ನು ಆಯೋಜಿಸುವುದರ ಮೂಲಕ ಪ್ರವಾಸೋದ್ಯಮಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ’ ಎಂದರು.</p>.<p>ಪ್ರವಾಸದ ಅನುಭವ ತೆರೆದಿಟ್ಟಸೂರ್ಯನಾರಾಯಣ ರಾವ್, ‘ಪ್ರತಿಕೂಲ ಹವಾಮಾನ, ಅಪರಿಚಿತ ತಾಣಗಳಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರವಾಸಿಗರ ಬಗ್ಗೆ ವಹಿಸುವ ಕಾಳಜಿ ಸ್ತುತ್ಯರ್ಹ. ಸಂಸ್ಥೆಯ ಸೇವೆಗಳು ಗುಣಮಟ್ಟದಿಂದ ಕೂಡಿವೆ. ಇಂತಹ ನಂಬಿಕಸ್ಥ, ಪ್ರಾಮಾಣಿಕ ಸಂಸ್ಥೆ ಸುವರ್ಣ ಮಹೋತ್ಸವ ಆಚರಿಸುವಂತಾಗಲಿ’ ಎಂದು ಹಾರೈಸಿದರು.</p>.<p>ಸಂಸ್ಥೆಯ ಸ್ಥಾಪಕ ಕೆ. ನಾಗರಾಜ ಅಡಿಗ, ‘ಕಡಿಮೆ ದಿನಗಳಲ್ಲಿ ದೂರದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಗಳಿಗೆ ವಿಶೇಷ ಪ್ರವಾಸದ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.</p>.<p>ಅಮರನಾಥ, ಕೇದಾರನಾಥ ಹಾಗೂ ಕೈಲಾಸ ಮಾನಸ ಸರೋವರಕ್ಕೆ ಹೆಲಿಕಾಪ್ಟರ್ ಮೂಲಕ ಯಾತ್ರೆಯನ್ನು ಆಯೋಜಿಸಿ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಮಾಲ್ಡೀವ್ಸ್, ಶ್ರೀಲಂಕಾ, ಥಾಯ್ಲೆಂಡ್, ಸಿಂಗಪುರ, ಮಲೇಷ್ಯಾ, ನೇಪಾಳ, ಭೂತಾನ್, ಹಾಂಕಾಂಗ್, ಮಕಾವ್, ಇಂಡೋನೇಷ್ಯಾ ಪ್ರವಾಸಗಳನ್ನು ರೂಪಿಸಲಾಗಿದೆ' ಎಂದು ತಿಳಿಸಿದರು.</p>.<p>‘ರಜತ ಮಹೋತ್ಸವದ ಪ್ರಯುಕ್ತ ಕೈಲಾಸ ಮಾನಸ ಸರೋವರ ಯಾತ್ರಿಕರಿಗೆ ಈ ಬಾರಿ ವಿಶೇಷವಾಗಿ ₹20 ಸಾವಿರ ರಿಯಾಯಿತಿ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>