<p><strong>ಬೆಂಗಳೂರು</strong>: ಜಿಬಿಎ – ನಗರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ನೌಕರರ ದೇಣಿಗೆಯೊಂದಿಗೆ ಜೀರ್ಣೋದ್ಧಾರ ಮಾಡಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಆದಿಶಕ್ತಿ ದೇವಾಲಯ ಶುಕ್ರವಾರ ಉದ್ಘಾಟನೆಯಾಯಿತು.</p>.<p>ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಅರ್ಚಕರು, ಆಗಮ ಪಂಡಿತರಿಂದ ಜ.21ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶುಕ್ರವಾರ ಶತಚಂಡಿಕಯಾಗ ನಡೆಯಿತು. ನೊಣವಿನಕೆರೆ ಕಾಡಸಿದ್ದೇಶ್ವರ ಟ್ರಸ್ಟ್ ದೇವಸ್ಥಾನದ ಆನೆಯನ್ನು ದೇವತಾ ಕಾರ್ಯಕ್ಕೆ ಕರೆತರಲಾಗಿತ್ತು.</p>.<p>‘ಜಿಬಿಎ ಹಾಗೂ ಪಾಲಿಕೆ ನೌಕರರ ನೆರವಿನಿಂದ ಪುರಾತನ ದೇವಸ್ಥಾನಕ್ಕೆ ಹೊಸ ರೂಪ ಕೊಡಲಾಗಿದೆ. ಶುಕ್ರವಾರ ಸುಮಾರು ಐದು ಸಾವಿರ ಭಕ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು’ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ಸುಮಾರು 800 ವರ್ಷಗಳ ಇತಿಹಾಸವಿರುವ ಈ ದೇವಾಲಯದ ಆವರಣದಲ್ಲಿ ಮಹಾಗಣಪತಿ, ಸಪ್ತಮಾತೃಕೆಯರು, ಕಾಶಿ ವಿಶ್ವನಾಥ ದಂಪತಿ ಸಮೇತ ಪೋತುರಾಜಸ್ವಾಮಿ, ವಲ್ಲಿ ದೇವಸೇನಾ ಸಮೇತ ಕಾರ್ತೀಕೇಯ, ಆಂಜನೇಯ, ಆದಿ ದೇವತೆಗಳು, ಅಷ್ಟ ದಿಕ್ಪಾಲಕರೊಂದಿಗೆ ನವಗ್ರಹ, ಶನಿ ಮಹಾತ್ಮ ದೇವರುಗಳಿದ್ದು, ಸೂರ್ಯ ಭಗವಾನ್ ಮತ್ತು ಕಾಲಭೈರವ ದೇವರ ಮೂರ್ತಿಯನ್ನು ಹೊಸದಾಗಿ ಸ್ಥಾಪಿಸಲಾಗಿದೆ.</p>.<p>ಜಿಬಿಎ ಕೇಂದ್ರ ಕಚೇರಿಯ ಆವರಣದಲ್ಲಿ ಮೂರು ದಿನ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಎಲ್ಲೆಡೆ ಹೂವಿನ ಅಲಂಕಾರ, ವಿದ್ಯುತ್ ದ್ವೀಪಗಳು ಸೇರಿದಂತೆ ವಿಶಿಷ್ಟ ರೀತಿಯಲ್ಲಿ ಕೋಟೆಯ ಪ್ರತಿಕೃತಿಯನ್ನು ನಿರ್ಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಿಬಿಎ – ನಗರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ನೌಕರರ ದೇಣಿಗೆಯೊಂದಿಗೆ ಜೀರ್ಣೋದ್ಧಾರ ಮಾಡಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಆದಿಶಕ್ತಿ ದೇವಾಲಯ ಶುಕ್ರವಾರ ಉದ್ಘಾಟನೆಯಾಯಿತು.</p>.<p>ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಅರ್ಚಕರು, ಆಗಮ ಪಂಡಿತರಿಂದ ಜ.21ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶುಕ್ರವಾರ ಶತಚಂಡಿಕಯಾಗ ನಡೆಯಿತು. ನೊಣವಿನಕೆರೆ ಕಾಡಸಿದ್ದೇಶ್ವರ ಟ್ರಸ್ಟ್ ದೇವಸ್ಥಾನದ ಆನೆಯನ್ನು ದೇವತಾ ಕಾರ್ಯಕ್ಕೆ ಕರೆತರಲಾಗಿತ್ತು.</p>.<p>‘ಜಿಬಿಎ ಹಾಗೂ ಪಾಲಿಕೆ ನೌಕರರ ನೆರವಿನಿಂದ ಪುರಾತನ ದೇವಸ್ಥಾನಕ್ಕೆ ಹೊಸ ರೂಪ ಕೊಡಲಾಗಿದೆ. ಶುಕ್ರವಾರ ಸುಮಾರು ಐದು ಸಾವಿರ ಭಕ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು’ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ಸುಮಾರು 800 ವರ್ಷಗಳ ಇತಿಹಾಸವಿರುವ ಈ ದೇವಾಲಯದ ಆವರಣದಲ್ಲಿ ಮಹಾಗಣಪತಿ, ಸಪ್ತಮಾತೃಕೆಯರು, ಕಾಶಿ ವಿಶ್ವನಾಥ ದಂಪತಿ ಸಮೇತ ಪೋತುರಾಜಸ್ವಾಮಿ, ವಲ್ಲಿ ದೇವಸೇನಾ ಸಮೇತ ಕಾರ್ತೀಕೇಯ, ಆಂಜನೇಯ, ಆದಿ ದೇವತೆಗಳು, ಅಷ್ಟ ದಿಕ್ಪಾಲಕರೊಂದಿಗೆ ನವಗ್ರಹ, ಶನಿ ಮಹಾತ್ಮ ದೇವರುಗಳಿದ್ದು, ಸೂರ್ಯ ಭಗವಾನ್ ಮತ್ತು ಕಾಲಭೈರವ ದೇವರ ಮೂರ್ತಿಯನ್ನು ಹೊಸದಾಗಿ ಸ್ಥಾಪಿಸಲಾಗಿದೆ.</p>.<p>ಜಿಬಿಎ ಕೇಂದ್ರ ಕಚೇರಿಯ ಆವರಣದಲ್ಲಿ ಮೂರು ದಿನ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಎಲ್ಲೆಡೆ ಹೂವಿನ ಅಲಂಕಾರ, ವಿದ್ಯುತ್ ದ್ವೀಪಗಳು ಸೇರಿದಂತೆ ವಿಶಿಷ್ಟ ರೀತಿಯಲ್ಲಿ ಕೋಟೆಯ ಪ್ರತಿಕೃತಿಯನ್ನು ನಿರ್ಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>